ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ರೈತರ ಸಾವಿನ ಸಂಖ್ಯೆ | 2023ರಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ | ವರದಿ ಬಹಿರಂಗ

January 26, 2024
5:52 PM

ಭಾರತ(India) ದೇಶಕ್ಕೆ ರೈತರೇ(Farmer) ಬೆನ್ನೆಲುಬು. ಕೃಷಿ(Agriculture) ಇಲ್ಲದೆ ನಮ್ಮ ದೇಶವನ್ನು ಊಹಿಸಲೂ ಅಸಾಧ್ಯ. ನಮ್ಮ ದೇಶದಲ್ಲಿ ಹೆಚ್ಚಿನ ಜನರು ಕೃಷಿಯನ್ನು ಅವಲಂಬಿತರಾಗಿದ್ದಾರೆ. ಆದರೆ ಕೃಷಿ, ರೈತರಿಗೆ ಸಿಗಬೇಕಾದ ಸೌಲಭ್ಯ, ಗಮನ ತೀರ ಕಡಿಮೆ. ಇದರ ಪರಿಣಾಮವೇ ರೈತರ ಆತ್ಮಹತ್ಯೆ(Farmer Suicide). ಪ್ರತಿ ವರ್ಷ ರೈತರ ಆತ್ಮಹತ್ಯೆ ಸರಣಿ ಮುಂದುವರಿಯುತ್ತಲೇ ಇದೆ. ಇದು ನಿಜಕ್ಕೂ ದುರಾಅದೃಷ್ಟಕರ ಸಂಗತಿ. ಈ ಸಮಸ್ಯೆಯನ್ನು ತಡೆಗಟ್ಟುವಲ್ಲಿ  ಭಾರತ ಸರ್ಕಾರವು(Central Govt) ವಿಫಲವಾಗಿದೆ ಎನ್ನುವುದನ್ನು ಇತ್ತೀಚಿನ ಆತ್ಮಹತ್ಯೆ ಕುರಿತ ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.ಮುಂದೆ ಓದಿ

Advertisement

2023ರಲ್ಲಿ ಮಹಾರಾಷ್ಟ್ರದ ಎಂಟು ಜಿಲ್ಲೆಗಳಲ್ಲಿ 1,088 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಮರಾಠವಾಡ ವಿಭಾಗೀಯ ಆಯುಕ್ತರ ಕಚೇರಿಯ ವರದಿಯು ಬಹಿರಂಗಪಡಿಸಿದೆ. ಇದು 2022ರಲ್ಲಿ ವರದಿಯಾಗಿದ್ದ ರೈತರ ಸಾವಿಗಳಿಗಿಂತ ಹೆಚ್ಚಳವಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿದೆ. 2023ರಲ್ಲಿ ನಡೆದ 1,088 ಆತ್ಮಹತ್ಯೆಗಳಲ್ಲಿ ಮಹರಾಷ್ಟ್ರದ ಬೀಡ್‌ನಲ್ಲಿ 269 ಸಾವುಗಳು, ಛತ್ರಪತಿ ಸಂಭಾಜಿನಗರದಲ್ಲಿ 182, ನಾಂದೇಡ್‌ನಲ್ಲಿ 175, ಧಾರಶಿವ್‌ನಲ್ಲಿ 171 ಮತ್ತು ಪರ್ಭಾನಿಯಲ್ಲಿ 103 ಸಾವುಗಳು ಸಂಭವಿಸಿದೆ ಎಂದು ಅಂಕಿ-ಅಂಶಗಳು ವರದಿ ಮಾಡಿದೆ.ಮುಂದೆ ಓದಿ

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಲಾಗಿದೆ. 1,088 ಪ್ರಕರಣಗಳಲ್ಲಿ 151 ಪ್ರಕರಣಗಳು ಪ್ರಸ್ತುತ ವಿಚಾರಣೆಯಲ್ಲಿವೆ ಎಂದು ಪಿಟಿಐ ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ,  2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ದೇಶಾದ್ಯಂತ ದಿನಕ್ಕೆ ಸರಾಸರಿ 30ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.ಮುಂದೆ ಓದಿ

ಸಾರ್ವಜನಿಕ ಹೂಡಿಕೆಗಳ ಕಡಿತ, ಪ್ರಮುಖ ಕೈಗಾರಿಕೆಗಳ ಖಾಸಗೀಕರಣ, ಬಾಹ್ಯ ವ್ಯಾಪಾರ, ರಾಜ್ಯಗಳ ಸಬ್ಸಿಡಿಗಳ ಕಡಿತ ಮತ್ತು ಕೃಷಿ ಸಾಲದ ಕಡಿತ ಇವೆಲ್ಲವೂ ರೈತರ ದೀರ್ಘ ಕಾಲದ ಸಂಕಷ್ಟಕ್ಕೆ ಕಾರಣವಾಗಿದೆ. ವರದಿಯ ಪ್ರಕಾರ ಛತ್ರಪತಿ ಸಂಭಾಜಿನಗರ, ಜಲ್ನಾ, ಬೀಡ್, ಹಿಂಗೋಲಿ, ಧಾರಶಿವ್, ಲಾತೂರ್, ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಗಳನ್ನು ಒಳಗೊಂಡಿರುವ ಮರಾಠವಾಡದಲ್ಲಿ 2022ರಲ್ಲಿ 1,023 ರೈತರ ಆತ್ಮಹತ್ಯೆಗಳು ವರದಿಯಾಗಿತ್ತು. ಈ ವರ್ಷ ಈ ಜಿಲ್ಲೆಗಳಲ್ಲಿ ಆತ್ಮಹತ್ಯೆಗಳ ಅಂಕಿ-ಅಂಶಗಳಲ್ಲಿ ಹೆಚ್ಚಳ ಕಂಡು ಬಂದಿದೆ.ಮುಂದೆ ಓದಿ

ರೈತರ ಆತ್ಮಹತ್ಯೆಗೆ ಕಾರಣಗಳೇನು?  : ನಮ್ಮ ದೇಶದಲ್ಲಿ ರೈತರ ಆತ್ಮಹತ್ಯೆ ಏಕೆ ನಡೆಯುತ್ತಿದೆ ಎಂಬುದನ್ನು ನೋಡಿದಾಗ ಸಾಕಷ್ಟು ಕಾರಣಗಳು ನಮ್ಮ ಮುಂದೆ ಕಂಡು ಬರುತ್ತದೆ. ಮಳೆಯ ಕೊರತೆಯಿಂದಾಗಿ ಬೆಳೆಗಳ ನಾಶವಾಗುತ್ತದೆ. ರೈತರು ತಾವು ಹೂಡಿಕೆ ಮಾಡಿದ ಹಣ ವ್ಯರ್ಥವಾಗಿ ಸಾಲದ ಸುಳಿಯಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಎಂಬುವುದು ಗಮನಾರ್ಹ. ಅದೇ ರೀತಿ ಪ್ರವಾಹಗಳು ಕೂಡ ಬರಗಾಲದಷ್ಟೇ ಅಪಾಯಕಾರಿ. ರೈತರ ಬೆಳೆಗಳು ಕೊಚ್ಚಿ ಹೋಗುತ್ತವೆ ಮತ್ತು ಆ ಬೆಳೆಗಳಿಂದ ಅವರಿಗೆ ಯಾವುದೇ ಉತ್ಪನ್ನ ಸಿಗುವುದಿಲ್ಲ. ಬೆಳೆ ಬೆಳೆಯಲು ಭಾರೀ ಸಾಲ ಪಡೆದು ನಷ್ಟವುಂಟಾಗಿ ಅದನ್ನು ತೀರಿಸಲು ಹಣವಿಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಡವಾಳೀಕರಣ ಮತ್ತು ಖಾಸಗೀಕರಣವು ಕೂಡ ಆತ್ಮಹತ್ಯೆಗೆ ಕಾರಣವಾಗಿದ್ದು,  ಹೆಚ್ಚಿನ ಸಾಲಗಳು ಮತ್ತು ಕುಟುಂಬದ ಒತ್ತಡವೂ ರೈತರನ್ನು ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಸಾಮೂಹಿಕ ಪ್ರಯತ್ನದಿಂದ ರೈತರ ಆತ್ಮಹತ್ಯೆ ತಡೆಯಬಹುದು. ಸರಕಾರ ರೈತರಿಗೆ ಆಧುನಿಕ ತಂತ್ರಜ್ಞಾನ ಕಲಿಸಬೇಕು. ಇದಲ್ಲದೆ ಅವರಿಗೆ ಸರಿಯಾದ ನೀರಾವರಿ ಸೌಲಭ್ಯಗಳನ್ನು ನೀಡಬೇಕು. ರೈತರ ನಷ್ಟವನ್ನು ಸರಿದೂಗಿಸುವ ನಿಜವಾದ ಬೆಳೆ ವಿಮಾ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ.

Source: ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ
April 26, 2025
9:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ
April 26, 2025
9:12 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |
April 26, 2025
1:58 PM
by: ಸಾಯಿಶೇಖರ್ ಕರಿಕಳ
ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ
April 26, 2025
9:21 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group