Advertisement
MIRROR FOCUS

‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?

Share

ಮೇಕುದಾಟು ಯೋಜನೆ(Mekedatu Project) ಕರುನಾಡ ಜನರ ಬಹುದಿನಗಳ ಬೇಡಿಕೆ. ಆದರೆ ಈವರೆಗೆ ಯಾವುದೇ ರಾಜಕೀಯ ಪಕ್ಷಗಳು(Political Parties) ಅದನ್ನು ಪೂರ್ಣಗೊಳಿಸುವಲ್ಲಿ ಮನಸ್ಸು ಮಾಡಿಲ್ಲ. ಕೇವಲ ಭರವಸೆಗಳ ಮೇಲೆ ಭರವಸೆ ನೀಡಿ ಚುನಾವಣಾ ಅಸ್ತ್ರ (Political agenda) ಮಾಡಿದ್ದು ಬಿಟ್ಟರೆ ಬೇರೇನು ಮಾಡಿಲ್ಲ. ಮೇಕೆದಾಟು ಯೋಜನೆಗೆ ಬಲವಾಗಿ ವಿರೋಧಿಸುತ್ತಿರುವ ತಮಿಳುನಾಡು(Tamilnadu) ತನ್ನ ಪಾರುಪತ್ಯವನ್ನು ಸಾಧಿಸುತ್ತಲೇ ಬಂದಿದೆ. ಇದೀಗಗ ಒಂದು ಹೆಜ್ಜೆ ಮುಂದೆ ಹೋಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ(Manifesto) ಪ್ರತಿಪಕ್ಷಗಳ ಮೈತ್ರಿಕೂಟವು(INDIA) ಲೋಕಸಭಾ ಚುನಾವಣೆಯಲ್ಲಿ(Loksabaha Election) ಗೆದ್ದರೆ ಕರ್ನಾಟಕ(Karnataka) ರಾಜ್ಯ ಉದ್ದೇಶಿಸಿರುವ ಮೇಕೆದಾಡು ಆಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ.

Advertisement
Advertisement
Advertisement
Advertisement

ಇದು ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಏಕೆಂದರೆ ಇಂಡಿಯಾ ಕೂಟದಲ್ಲಿ ಕಾಂಗ್ರೆಸ್ ಪ್ರಧಾನ ಪಕ್ಷವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 2019ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ಮತ್ತು ಅಲ್ಲಿ ಚುನಾವಣೆ ನಡೆಸುವುದು, ಹೊಸ ಶಿಕ್ಷಣ ನೀತಿ 2020 ಅನ್ನು ರದ್ದುಗೊಳಿಸುವುದು, ಇಂಧನ ಬೆಲೆಗಳನ್ನು ಕಡಿಮೆ ಮಾಡುವುದು, ಕಾನೂನು ಕ್ರಮದಿಂದ ರಾಜ್ಯಪಾಲರಿಗೆ ರಕ್ಷಣೆ ನೀಡುವ ಸಂವಿಧಾನದ 361 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿದ ನಂತರ ರಾಜ್ಯಪಾಲರನ್ನು ನೇಮಕ ಮಾಡುವುದು ಡಿಎಂಕೆ ನೀಡಿದ ಪ್ರಮುಖ ಭರವಸೆಗಳಲ್ಲಿ ಸೇರಿವೆ.

Advertisement

ಕೃಷಿ ಉತ್ಪನ್ನಗಳಿಗೆ ಎಂಎಸ್ಪಿಯನ್ನು ಒಟ್ಟು ಉತ್ಪಾದನಾ ವೆಚ್ಚ ಮತ್ತು 50 ಪ್ರತಿಶತದಷ್ಟು ನಿಗದಿಪಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಎಂ.ಎಸ್.ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಡಿಎಂಕೆ ಹೇಳಿದೆ. ಅಲ್ಲದೆ, INDIA ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆಯನ್ನು ಹಿಂತೆಗೆದುಕೊಳ್ಳುವುದಾಗಿ ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ “ಶಾಶ್ವತ ನೇಮಕಾತಿ ಸೇವೆಯನ್ನು” ಮತ್ತೆ ಪರಿಚಯಿಸುವುದಾಗಿ ಅದು ಘೋಷಿಸಿತು. ಇನ್ನು ಮುಂದೆ ಜಾತಿವಾರು ಜನಗಣತಿ ಮತ್ತು ಬಡತನ ರೇಖೆಗಿಂತ ಕೆಳಗಿರುವ ಜನರ ಗಣತಿ ಸೇರಿದಂತೆ ಜನಗಣತಿಯನ್ನು ಕೇಂದ್ರ ಸರ್ಕಾರವು ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲದಲ್ಲಿ ನಡೆಸಲಿದೆ.

courtesy – By Dailyhunt

Advertisement

In its manifesto released by the ruling DMK of Tamil Nadu, the opposition alliance (INDIA) has said that if it wins the Lok Sabha election (Loksabaha Election), it will not allow the construction of Goat Dam intended by the state of Karnataka.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

16 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

16 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

16 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

16 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

23 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

23 hours ago