Advertisement
MIRROR FOCUS

‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?

Share

ಮೇಕುದಾಟು ಯೋಜನೆ(Mekedatu Project) ಕರುನಾಡ ಜನರ ಬಹುದಿನಗಳ ಬೇಡಿಕೆ. ಆದರೆ ಈವರೆಗೆ ಯಾವುದೇ ರಾಜಕೀಯ ಪಕ್ಷಗಳು(Political Parties) ಅದನ್ನು ಪೂರ್ಣಗೊಳಿಸುವಲ್ಲಿ ಮನಸ್ಸು ಮಾಡಿಲ್ಲ. ಕೇವಲ ಭರವಸೆಗಳ ಮೇಲೆ ಭರವಸೆ ನೀಡಿ ಚುನಾವಣಾ ಅಸ್ತ್ರ (Political agenda) ಮಾಡಿದ್ದು ಬಿಟ್ಟರೆ ಬೇರೇನು ಮಾಡಿಲ್ಲ. ಮೇಕೆದಾಟು ಯೋಜನೆಗೆ ಬಲವಾಗಿ ವಿರೋಧಿಸುತ್ತಿರುವ ತಮಿಳುನಾಡು(Tamilnadu) ತನ್ನ ಪಾರುಪತ್ಯವನ್ನು ಸಾಧಿಸುತ್ತಲೇ ಬಂದಿದೆ. ಇದೀಗಗ ಒಂದು ಹೆಜ್ಜೆ ಮುಂದೆ ಹೋಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ(Manifesto) ಪ್ರತಿಪಕ್ಷಗಳ ಮೈತ್ರಿಕೂಟವು(INDIA) ಲೋಕಸಭಾ ಚುನಾವಣೆಯಲ್ಲಿ(Loksabaha Election) ಗೆದ್ದರೆ ಕರ್ನಾಟಕ(Karnataka) ರಾಜ್ಯ ಉದ್ದೇಶಿಸಿರುವ ಮೇಕೆದಾಡು ಆಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ.

ಇದು ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಏಕೆಂದರೆ ಇಂಡಿಯಾ ಕೂಟದಲ್ಲಿ ಕಾಂಗ್ರೆಸ್ ಪ್ರಧಾನ ಪಕ್ಷವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 2019ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ಮತ್ತು ಅಲ್ಲಿ ಚುನಾವಣೆ ನಡೆಸುವುದು, ಹೊಸ ಶಿಕ್ಷಣ ನೀತಿ 2020 ಅನ್ನು ರದ್ದುಗೊಳಿಸುವುದು, ಇಂಧನ ಬೆಲೆಗಳನ್ನು ಕಡಿಮೆ ಮಾಡುವುದು, ಕಾನೂನು ಕ್ರಮದಿಂದ ರಾಜ್ಯಪಾಲರಿಗೆ ರಕ್ಷಣೆ ನೀಡುವ ಸಂವಿಧಾನದ 361 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿದ ನಂತರ ರಾಜ್ಯಪಾಲರನ್ನು ನೇಮಕ ಮಾಡುವುದು ಡಿಎಂಕೆ ನೀಡಿದ ಪ್ರಮುಖ ಭರವಸೆಗಳಲ್ಲಿ ಸೇರಿವೆ.

ಕೃಷಿ ಉತ್ಪನ್ನಗಳಿಗೆ ಎಂಎಸ್ಪಿಯನ್ನು ಒಟ್ಟು ಉತ್ಪಾದನಾ ವೆಚ್ಚ ಮತ್ತು 50 ಪ್ರತಿಶತದಷ್ಟು ನಿಗದಿಪಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಎಂ.ಎಸ್.ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಡಿಎಂಕೆ ಹೇಳಿದೆ. ಅಲ್ಲದೆ, INDIA ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆಯನ್ನು ಹಿಂತೆಗೆದುಕೊಳ್ಳುವುದಾಗಿ ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ “ಶಾಶ್ವತ ನೇಮಕಾತಿ ಸೇವೆಯನ್ನು” ಮತ್ತೆ ಪರಿಚಯಿಸುವುದಾಗಿ ಅದು ಘೋಷಿಸಿತು. ಇನ್ನು ಮುಂದೆ ಜಾತಿವಾರು ಜನಗಣತಿ ಮತ್ತು ಬಡತನ ರೇಖೆಗಿಂತ ಕೆಳಗಿರುವ ಜನರ ಗಣತಿ ಸೇರಿದಂತೆ ಜನಗಣತಿಯನ್ನು ಕೇಂದ್ರ ಸರ್ಕಾರವು ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲದಲ್ಲಿ ನಡೆಸಲಿದೆ.

courtesy – By Dailyhunt

In its manifesto released by the ruling DMK of Tamil Nadu, the opposition alliance (INDIA) has said that if it wins the Lok Sabha election (Loksabaha Election), it will not allow the construction of Goat Dam intended by the state of Karnataka.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago