Advertisement
ಸುದ್ದಿಗಳು

ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ, ಪರಿಸ್ಥಿತಿ ಅವಲೋಕಿಸಿ, ಗಾಯಾಳುಗಳನ್ನು ಭೇಟಿ ಮಾಡಿದ ಮೋದಿ

Share

ಒಡಿಶಾದ ಬಾಲಸೋರ್​ನಲ್ಲಿ  ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸುಮಾರು 300 ಸಾವಿರ ಪ್ರಯಾಣಿಕರು ಸಾವೀಗಿಡಾಗಿದ್ದಾರೆ.  1000 ಮಂದಿಗೂ ಹೆಚ್ಚು ಮಂದಿ ಗಾಯಾಳುಗಳಾಗಿದ್ದು, ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ  15ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿ ಎದುರಿನ ಹಳಿ ಮೇಲೆ ಬಿದ್ದವು. ತರುವಾಯ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲಿನ ಮೂರರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ. 

ಸ್ಥಳಕ್ಕೆ ಭೇಡಿ ನೀಡಿರುವ ಪ್ರಧಾನಿ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೂ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.

10 ಲಕ್ಷ ಪರಿಹಾರ ಘೋಷಣೆ

ಇನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಳಿ ತಪ್ಪಿದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ರೈಲ್ವೆ ಸಚಿವಾಲಯವು ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳನ್ನು, ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಗಳನ್ನು, ಸಣ್ಣಪುಟ್ಟ ಗಾಯಗಳಾಗಿರುವವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

ಕೋರಮಂಡಲ್​ ಎಕ್ಸ್​ಪ್ರೆಸ್​ 1977ರಲ್ಲಿ ಸಂಚಾರ ಆರಂಭಿಸಿತ್ತು. 2002ರ ಮಾರ್ಚ್‌ 15 ರಂದು ನೆಲ್ಲೂರು ಜಿಲ್ಲೆಯ ಕೋವುರು ಮಂಡಲ ಮೇಲು ಸೇತುವೆ ಬಳಿ ಏಳು ಬೋಗಿಗಳು ಹಳಿ ತಪ್ಪಿದ್ದವು. ಇದರಲ್ಲಿ ಸುಮಾರು ನೂರು ಪ್ರಯಾಣಿಕರು ಗಾಯಗೊಂಡಿದ್ದರು.‌ ಮತ್ತೆ 2009ರ ಫೆಬ್ರವರಿ 13 ರಂದು ಒಡಿಶಾದಿಂದ ನೂರು ಕಿಲೋಮೀಟರ್ ದೂರದಲ್ಲಿರುವ ಜಾಜ್‌ಪುರ ಕಿಯೋಂಜಾರ್ ರಸ್ತೆ ಬಳಿ ಹಳಿ ತಪ್ಪಿ 16 ಪ್ರಯಾಣಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 hour ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

8 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

12 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

20 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

20 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

22 hours ago