Advertisement
MIRROR FOCUS

#RuralRoad | ಕೊಲ್ಲಮೊಗ್ರದಲ್ಲಿ 5.5 ಕೋಟಿ ರೂಪಾಯಿಯ ರಸ್ತೆ ಕಾಮಗಾರಿ | ಗ್ರಾಮೀಣ ರಸ್ತೆಯ ಗುಣಮಟ್ಟವಿಲ್ಲದ ಕಾಮಗಾರಿ | ಸಾರ್ವಜನಿಕರ ಅಸಮಾಧಾನ-ಅಧಿಕಾರಿಗಳ ಭೇಟಿ |

Share

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನಗಳು ಬರುವುದೇ ಅಪರೂಪ. ಬಂದ ಅನುದಾನಗಳು ಸರಿಯಾಗಿ ಬಳಕೆಯಾಗಬೇಕು, ಗುಣಮಟ್ಟದಿಂದ ಕೂಡಿರಬೇಕು ಎನ್ನುವುದು ಗ್ರಾಮೀಣ ಜನರೆಲ್ಲರ ಒತ್ತಾಯ. ಆದರೆ ಅನೇಕರು ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟವಿಲ್ಲದ ಕಾಮಗಾರಿ ಮಾಡಿದರೆ ಯಾರಿಗೂ ತಿಳಿಯದು ಅಂದುಕೊಳ್ಳುತ್ತಾರೆ. ಅಂತಹವರಿಗೆ ಕೊಲ್ಲಮೊಗ್ರದ ಈ ಘಟನೆ ಎಚ್ಚರಿಕೆಯಾಗಬೇಕು. 

ಕಾಂಕ್ರೀಟ್‌ ರಸ್ತೆಯ ಗುಣಮಟ್ಟದ ಬಗ್ಗೆ ಸಾರ್ವಜನಿಕರ ಆಕ್ಷೇಪ

ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಕಟ್ಟ-ಕರಂಗಲ್ಲು-ಕೊಲ್ಲಮೊಗ್ರ ಸಂಪರ್ಕ ರಸ್ತೆಗೆ ಸುಮಾರು 5.5ಕೋಟಿ ರೂಪಾಯಿ ವಿಶೇಷ ಅನುದಾನದಲ್ಲಿ “ನಮ್ಮ ಗ್ರಾಮ-ನಮ್ಮ ರಸ್ತೆ”ಯ ಮೂಲಕ ಅನುದಾನ ಬಿಡುಗಡೆಗೊಂಡಿತ್ತು. ಈ ಕಾಮಗಾರಿ ಕಳೆದ ಎರಡು ತಿಂಗಳ ಹಿಂದೆ ಪೂರ್ತಿಗೊಂಡು ಸಂಚಾರಕ್ಕೆ ಯೋಗ್ಯವಾಗಿತ್ತು. ಆದರೆ ಕಾಮಗಾರಿ ನಡೆಯುವ ಸಮಯದಲ್ಲಿ ಊರಿನ ಜನರು ಪದೇ ಪದೇ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಾಕಷ್ಟು ಬಾರಿ ದೂರು ಇಂಜಿನಿಯರ್ ಅವರಿಗೆ ನೀಡಿದ್ದರು. ಹಾಗಿದ್ದರೂ ಕ್ರಮಕೈಗೊಂಡಿಲ್ಲ ಎಂಬ ಆರೋಪ ಬಂದಿತ್ತು.ಈ ಕಾಮಗಾರಿ ಕುಂದಾಪುರದ ಮೂಲದ ಗುತ್ತಿಗೆದಾರರು ಪಡೆದುಕೊಂಡಿದ್ದರು.

ಕಾಂಕ್ರೀಟ್‌ ರಸ್ತೆ ಬಿರುಕು ಬಿಟ್ಟಿರುವುದು

ಮಳೆ ಪ್ರಾರಂಭವಾಗಿ ಮೊದಲ ವಾರದಲ್ಲಿ ಕಾಮಗಾರಿ ಹಲವು ಕಡೆಗಳಲ್ಲಿ ಗುಂಡಿ‌ ಹಾಗೂ ಕಾಂಕ್ರೀಟು ಸಂಪೂರ್ಣವಾಗಿ ಬಿರುಕು ಕಾಣಿಸಿಕೊಂಡು ಬಹುಕಾಲದ ಬೇಡಿಕೆಯ ರಸ್ತೆ ಜನರಿಗೆ ನಿರಾಸೆ ಮೂಡಿಸಿ ಆಕ್ರೋಶಕ್ಕೆ ಕಾರಣವಾಗಿತ್ತು.ಮೊದಲ ಮಳೆಗೆ ತಡೆಗೋಡೆ ಒಂದು ಕುಸಿದು ಹೋಗಿತ್ತು.ಈ ಸಂಬಂಧ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಸ್ಥಳೀಯರು ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಸ್ಪಂದಿಸಿದ ಅಧಿಕಾರಿಗಳು  ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲಿಸಿದಾಗ ಕಾಮಗಾರಿಯ ಗುಣಮಟ್ಟ ಕೆಳದರ್ಜೆಯಲ್ಲಿರುವುದು ಕಂಡುಬಂದಿದೆ.ಇಂಜಿನಿಯರ್ ಹಾಗೂ ಗುತ್ತಿಗೆದಾರರನ್ನು ಊರಿನವರು ತರಾಟೆಗೆ ತೆಗೆದುಕೊಂಡರು.

ಅಧಿಕಾರಿಗಳಿಂದ ಪರಿಶೀಲನೆ

ಇಂಜಿನಿಯರ್ ಅವರಿಗೆ ಕಳಪೆ ಕಾಮಗಾರಿ ಬಗ್ಗೆ ನಿರಂತರ ದೂರು ನೀಡುತ್ತಿದ್ದ ಉದಯ ಶಿವಾಲ ಅವರ  ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿರುವ ಬಗ್ಗೆ ಉದಯ ಶಿವಾಲ ಪ್ರಶ್ನಿಸಿದರು.ಸಮಸ್ಯೆಗಳನ್ನು ಪ್ರಶ್ನಿಸುವವರಿಂದ ತಪ್ಪಿಸಿಕೊಳ್ಳುವ ಬಗ್ಗೆ ಸಾರ್ವಜನಿಕರು ಹೇಳಿದರು.

ನಾವು ಕಳಪೆ ಕಾಮಗಾರಿ ಎಂದು ತಿಳಿಸಿದ ತಕ್ಷಣ ಇಂಜಿನಿಯರ್ ಜವಾಬ್ದಾರಿಯಿಂದ‌ ಕೆಲಸ ಮಾಡಿದರೆ  ಇಲ್ಲಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಕೆಲಸ‌ ಇರಲಿಲ್ಲ.ಮೇಲಾಧಿಕಾರಿಗಳು ಸ್ಪಂದಿಸುವ ರೀತಿ ಇಂಜಿನಿಯರ್ ಸ್ಪಂದಿಸಿದರೆ  ರಸ್ತೆಯೂ ಕಳಪೆಯಾಗುತ್ತಿರಲಿಲ್ಲ
ಉದಯ ಶಿವಾಲ , ಗ್ರಾಮಸ್ಥ

ತಕ್ಷಣವೇ ಕಳಪೆಯಾದ ಕಾಮಗಾರಿಯನ್ನು ಸಂಪೂರ್ಣವಾಗಿ‌ ತೆಗೆದು ಹೊಸ ಕಾಮಗಾರಿ ನಡೆಸಿಕೊಡುವಂತೆ ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸೂಚಿಸಿದರು. ಸಾರ್ವಜನಿಕರೊಂದಿಗೆ ನಾನು ಖಂಡಿತ ಇರುತ್ತೇನೆ ನೀವು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ನಾವು ಕಾಮಗಾರಿ ನಡೆಯುವ ವೇಳೆ ಗುತ್ತಿಗೆದಾರಿಗೆ ನಮ್ಮಿಂದ ಆದಷ್ಟು ಸಾಹಯ ಮಾಡಿ ಮನವಿಯತೆಯನ್ನು ತೋರಿಸಿದ್ದೇವೆ.ಆದರೂ ಇಂತಹ ಕಳಪೆ ರಸ್ತೆ ನಿರ್ಮಿಸಿಕೊಟ್ಟು ಹೋದ ಗುತ್ತಿಗೆದಾರರು ಆಮೇಲೆ ಕರೆಯನ್ನು ಸ್ವೀಕರಿಸಲಿಲ್ಲ
ನವೀನ್ ಕೊಪ್ಪಡ್ಕ, ಗ್ರಾಮಸ್ಥ

ಕಾಮಗಾರಿ ಪೂರ್ತಿಗೊಂಡ ಬಳಿಕ ಇನ್ನೊಮ್ಮೆ ಪರಿಶೀಲನೆ ನಡೆಸಲಾಗುತ್ತದೆ. ಕಳಪೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು  ಎಂದು ಹಿರಿಯ ಇಂಜಿನಿಯರ್‌ ವೇಣುಗೋಪಾಲ್‌ ಭರವಸೆ ನೀಡಿದರು.

ಕಾಮಗಾರಿ ಪರಿಶೀಲನೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago