ಡೀಮ್ಡ್ ಫಾರೆಸ್ಟ್ ಕುರಿತು ಆರು ತಿಂಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ  ಸೂಚನೆ

December 12, 2025
7:03 AM

ರಾಜ್ಯಾದ್ಯಂತ ಇರುವ 3 ಲಕ್ಷ 30 ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕುರಿತು ಆರು ತಿಂಗಳಲ್ಲಿ ವರದಿ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡೀಮ್ಡ್ ಫಾರೆಸ್ಟ್ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವರೊಂದಿಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಕಂದಾಯ ಇಲಾಖೆ ಜೊತೆಗೆ ಸೇರಿ ಜಂಟಿ ಸರ್ವೆ ನಡೆಸಿದ ಬಳಿಕ ಡೀಮ್ಡ್ ಅರಣ್ಯ ಭೂಮಿಯ ಬದಲಿಗೆ ಕಂದಾಯ ಭೂಮಿ ನೀಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದಸ್ಯರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಸಿ ಸಿ ಪಾಟೀಲ್  ಮಾತನಾಡಿ  ಇದು ತುಂಬಾ ಹಳೆಯ ಸಮಸ್ಯೆಯಾಗಿದೆ.  ಆದಷ್ಟು ಶೀಘ್ರವಾಗಿ ಈ ಸಮಸ್ಯೆ ಬಗೆಹರಿಸಲು ಕಾಲಮಿತಿಯೊಳಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror