ರಾಜ್ಯಾದ್ಯಂತ ಇರುವ 3 ಲಕ್ಷ 30 ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕುರಿತು ಆರು ತಿಂಗಳಲ್ಲಿ ವರದಿ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡೀಮ್ಡ್ ಫಾರೆಸ್ಟ್ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವರೊಂದಿಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಕಂದಾಯ ಇಲಾಖೆ ಜೊತೆಗೆ ಸೇರಿ ಜಂಟಿ ಸರ್ವೆ ನಡೆಸಿದ ಬಳಿಕ ಡೀಮ್ಡ್ ಅರಣ್ಯ ಭೂಮಿಯ ಬದಲಿಗೆ ಕಂದಾಯ ಭೂಮಿ ನೀಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದಸ್ಯರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಸಿ ಸಿ ಪಾಟೀಲ್ ಮಾತನಾಡಿ ಇದು ತುಂಬಾ ಹಳೆಯ ಸಮಸ್ಯೆಯಾಗಿದೆ. ಆದಷ್ಟು ಶೀಘ್ರವಾಗಿ ಈ ಸಮಸ್ಯೆ ಬಗೆಹರಿಸಲು ಕಾಲಮಿತಿಯೊಳಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…