ಸೂಕ್ಷ್ಮ ಅರಣ್ಯ ಪ್ರದೇಶಗಳ ಕುರಿತು ಅಧಿಕಾರಿಗಳ ಸಭೆ | ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದ ಸಭೆ

November 18, 2024
10:03 AM

ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Advertisement
Advertisement

ಬಳಿಕ ಸುದ್ದಿಗಾರರೊಂದಿಗೆ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರಿದಿಯನ್ನು ತಿರಸ್ಕಾರ ಮಾಡಿದ್ದು, ವರದಿಯ ಜಾರಿ ಕುರಿತು ಸಾರ್ವಜನಿಕರಲ್ಲಿ ಗೊಂದಲಗಳು ಸೃಷ್ಟಿಯಾಗಿವೆ.  ಗೊಂದಲಗಳ ನಿವಾರಣೆ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸದ್ಯಕ್ಕೆ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವರಿಗೆ ಅರಣ್ಯ ನೀತಿ -ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವವರಿಗೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿಯ ಅಗತ್ಯವಿಲ್ಲ. ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದು,  ಮೈಸೂರು ವಿಭಾಗಧಿಕಾರಿ ನೇತೃತ್ವದ ಸಮಿತಿಯ ಅನುಮತಿ ಮೂಲಕ ಪರವಾನಗಿ  ಪಡೆಯಬಹುದಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group