MIRROR FOCUS

ಸೂಕ್ಷ್ಮ ಅರಣ್ಯ ಪ್ರದೇಶಗಳ ಕುರಿತು ಅಧಿಕಾರಿಗಳ ಸಭೆ | ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದ ಸಭೆ

Share

ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರಿದಿಯನ್ನು ತಿರಸ್ಕಾರ ಮಾಡಿದ್ದು, ವರದಿಯ ಜಾರಿ ಕುರಿತು ಸಾರ್ವಜನಿಕರಲ್ಲಿ ಗೊಂದಲಗಳು ಸೃಷ್ಟಿಯಾಗಿವೆ.  ಗೊಂದಲಗಳ ನಿವಾರಣೆ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸದ್ಯಕ್ಕೆ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವರಿಗೆ ಅರಣ್ಯ ನೀತಿ -ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವವರಿಗೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿಯ ಅಗತ್ಯವಿಲ್ಲ. ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದು,  ಮೈಸೂರು ವಿಭಾಗಧಿಕಾರಿ ನೇತೃತ್ವದ ಸಮಿತಿಯ ಅನುಮತಿ ಮೂಲಕ ಪರವಾನಗಿ  ಪಡೆಯಬಹುದಾಗಿದೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

9 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

10 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

10 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

10 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

10 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

10 hours ago