ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರಿದಿಯನ್ನು ತಿರಸ್ಕಾರ ಮಾಡಿದ್ದು, ವರದಿಯ ಜಾರಿ ಕುರಿತು ಸಾರ್ವಜನಿಕರಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಗೊಂದಲಗಳ ನಿವಾರಣೆ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವರಿಗೆ ಅರಣ್ಯ ನೀತಿ -ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವವರಿಗೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿಯ ಅಗತ್ಯವಿಲ್ಲ. ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದು, ಮೈಸೂರು ವಿಭಾಗಧಿಕಾರಿ ನೇತೃತ್ವದ ಸಮಿತಿಯ ಅನುಮತಿ ಮೂಲಕ ಪರವಾನಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…