ಉಡುಪಿ ಜಿಲ್ಲೆಯಲ್ಲಿಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪಶ್ಚಿಮ ಘಟ್ಟಗಳ ಸೂಕ್ಷ್ಮ ಅರಣ್ಯ ಪ್ರದೇಶ ಮತ್ತು ಕಸ್ತೂರಿ ರಂಗನ್ ವರಿದಿ ಕುರಿತಾದ ಗೊಂದಲಗಳ ನಿವಾರಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರಿದಿಯನ್ನು ತಿರಸ್ಕಾರ ಮಾಡಿದ್ದು, ವರದಿಯ ಜಾರಿ ಕುರಿತು ಸಾರ್ವಜನಿಕರಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಗೊಂದಲಗಳ ನಿವಾರಣೆ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸದ್ಯಕ್ಕೆ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವರಿಗೆ ಅರಣ್ಯ ನೀತಿ -ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು. ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವವರಿಗೆ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿಯ ಅಗತ್ಯವಿಲ್ಲ. ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದು, ಮೈಸೂರು ವಿಭಾಗಧಿಕಾರಿ ನೇತೃತ್ವದ ಸಮಿತಿಯ ಅನುಮತಿ ಮೂಲಕ ಪರವಾನಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…