ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

October 2, 2023
8:28 PM
ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್ ಅಡಿಕೆ ಉತ್ಪಾದಿಸಿತ್ತು. ಈ ಬಾರಿ ಶೇ.52 ರಷ್ಟು ಕಡಿಮೆ ಇಳುವರಿಯಾಗಿದೆ. ಭಾರತಕ್ಕೆ ಭೂತಾನ್‌ ಅಡಿಕೆ ಈಗ ಸಮಸ್ಯೆಯಾಗುತ್ತಿಲ್ಲ. ಆದರೆ ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 442 ಚೀಲ ಅಡಿಕೆ ಸಹಿತ ಮೂವರನ್ನು ಗಡಿ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದೆ.ಮಣಿಪುರದ ಕಾಮ್‌ಜಾಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಗಡಿಯಾಚೆಗಿನ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. 442 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಗಡಿ ಭದ್ರತಾ ಪಡೆಯು ಸೆ.29 ರಿಂದ ಕಾರ್ಯಾಚರಣೆ ಆರಂಭಿಸಿತ್ತು.ಒಟ್ಟು ಕಾರ್ಯಾಚರಣೆಯಲ್ಲಿ  442 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ತಲಾ 100 ಕೆಜಿಯ 50 ಚೀಲಗಳು ಮತ್ತು ತಲಾ 80 ಕೆಜಿಯಂತೆ 392 ಚೀಲಗಳು ಸೇರಿವೆ ಎಂದು ಅಸ್ಸಾಂ ಗಡಿಭದ್ರತಾ ಪಡೆ ಮಾಹಿತಿ ನೀಡಿದೆ.

ಭೂತಾನ್‌ನಲ್ಲಿ ಕಡಿಮೆಯಾದ ಅಡಿಕೆ ಇಳುವರಿ : ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್  ಅಡಿಕೆಗಳನ್ನು ಉತ್ಪಾದಿಸಿತ್ತು. ಹಿಂದಿನ ವರ್ಷಕ್ಕಿಂತ 52 ಪ್ರತಿಶತ ಕಡಿಮೆಯಾಗಿದೆ. ಭೂತಾನ್‌ ತನ್ನ ದೇಶದಲ್ಲಿ ಅಡಿಕೆ ಹೆಚ್ಚು ಉತ್ಪಾದಿಸಿದ ಸಂದರ್ಭ  ಭಾರತಕ್ಕೆ ಅಡಿಕೆಯನ್ನು ರಫ್ತು ಮಾಡುತ್ತದೆ ಮತ್ತು ಕಡಿಮೆ ಋತುವಿನಲ್ಲಿ ಭಾರತದಿಂದ  ಆಮದು ಮಾಡಿಕೊಳ್ಳುತ್ತದೆ.2022 ರಲ್ಲಿ ಉತ್ಪಾದನೆಯು 10,271 ಮೆಟ್ರಿಕ್ ಟನ್  ರಷ್ಟು ಕಡಿಮೆಯಾಗಿದೆ ಎಂದು ಭೂತಾನ್ ಕೃಷಿ ಮಾರುಕಟ್ಟೆ ಮತ್ತು ಸಹಕಾರಿ ಇಲಾಖೆಯ ದಾಖಲೆಗಳು ಹೇಳಿವೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ
March 12, 2025
10:13 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |
March 12, 2025
10:03 PM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror