MIRROR FOCUS

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್ ಅಡಿಕೆ ಉತ್ಪಾದಿಸಿತ್ತು. ಈ ಬಾರಿ ಶೇ.52 ರಷ್ಟು ಕಡಿಮೆ ಇಳುವರಿಯಾಗಿದೆ. ಭಾರತಕ್ಕೆ ಭೂತಾನ್‌ ಅಡಿಕೆ ಈಗ ಸಮಸ್ಯೆಯಾಗುತ್ತಿಲ್ಲ. ಆದರೆ ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

Advertisement
Advertisement

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 442 ಚೀಲ ಅಡಿಕೆ ಸಹಿತ ಮೂವರನ್ನು ಗಡಿ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದೆ.ಮಣಿಪುರದ ಕಾಮ್‌ಜಾಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಗಡಿಯಾಚೆಗಿನ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. 442 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಗಡಿ ಭದ್ರತಾ ಪಡೆಯು ಸೆ.29 ರಿಂದ ಕಾರ್ಯಾಚರಣೆ ಆರಂಭಿಸಿತ್ತು.ಒಟ್ಟು ಕಾರ್ಯಾಚರಣೆಯಲ್ಲಿ  442 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ತಲಾ 100 ಕೆಜಿಯ 50 ಚೀಲಗಳು ಮತ್ತು ತಲಾ 80 ಕೆಜಿಯಂತೆ 392 ಚೀಲಗಳು ಸೇರಿವೆ ಎಂದು ಅಸ್ಸಾಂ ಗಡಿಭದ್ರತಾ ಪಡೆ ಮಾಹಿತಿ ನೀಡಿದೆ.

ಭೂತಾನ್‌ನಲ್ಲಿ ಕಡಿಮೆಯಾದ ಅಡಿಕೆ ಇಳುವರಿ : ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್  ಅಡಿಕೆಗಳನ್ನು ಉತ್ಪಾದಿಸಿತ್ತು. ಹಿಂದಿನ ವರ್ಷಕ್ಕಿಂತ 52 ಪ್ರತಿಶತ ಕಡಿಮೆಯಾಗಿದೆ. ಭೂತಾನ್‌ ತನ್ನ ದೇಶದಲ್ಲಿ ಅಡಿಕೆ ಹೆಚ್ಚು ಉತ್ಪಾದಿಸಿದ ಸಂದರ್ಭ  ಭಾರತಕ್ಕೆ ಅಡಿಕೆಯನ್ನು ರಫ್ತು ಮಾಡುತ್ತದೆ ಮತ್ತು ಕಡಿಮೆ ಋತುವಿನಲ್ಲಿ ಭಾರತದಿಂದ  ಆಮದು ಮಾಡಿಕೊಳ್ಳುತ್ತದೆ.2022 ರಲ್ಲಿ ಉತ್ಪಾದನೆಯು 10,271 ಮೆಟ್ರಿಕ್ ಟನ್  ರಷ್ಟು ಕಡಿಮೆಯಾಗಿದೆ ಎಂದು ಭೂತಾನ್ ಕೃಷಿ ಮಾರುಕಟ್ಟೆ ಮತ್ತು ಸಹಕಾರಿ ಇಲಾಖೆಯ ದಾಖಲೆಗಳು ಹೇಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

8 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

16 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

22 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago