MIRROR FOCUS

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್ ಅಡಿಕೆ ಉತ್ಪಾದಿಸಿತ್ತು. ಈ ಬಾರಿ ಶೇ.52 ರಷ್ಟು ಕಡಿಮೆ ಇಳುವರಿಯಾಗಿದೆ. ಭಾರತಕ್ಕೆ ಭೂತಾನ್‌ ಅಡಿಕೆ ಈಗ ಸಮಸ್ಯೆಯಾಗುತ್ತಿಲ್ಲ. ಆದರೆ ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

Advertisement

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 442 ಚೀಲ ಅಡಿಕೆ ಸಹಿತ ಮೂವರನ್ನು ಗಡಿ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದೆ.ಮಣಿಪುರದ ಕಾಮ್‌ಜಾಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಗಡಿಯಾಚೆಗಿನ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. 442 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಗಡಿ ಭದ್ರತಾ ಪಡೆಯು ಸೆ.29 ರಿಂದ ಕಾರ್ಯಾಚರಣೆ ಆರಂಭಿಸಿತ್ತು.ಒಟ್ಟು ಕಾರ್ಯಾಚರಣೆಯಲ್ಲಿ  442 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ತಲಾ 100 ಕೆಜಿಯ 50 ಚೀಲಗಳು ಮತ್ತು ತಲಾ 80 ಕೆಜಿಯಂತೆ 392 ಚೀಲಗಳು ಸೇರಿವೆ ಎಂದು ಅಸ್ಸಾಂ ಗಡಿಭದ್ರತಾ ಪಡೆ ಮಾಹಿತಿ ನೀಡಿದೆ.

ಭೂತಾನ್‌ನಲ್ಲಿ ಕಡಿಮೆಯಾದ ಅಡಿಕೆ ಇಳುವರಿ : ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್  ಅಡಿಕೆಗಳನ್ನು ಉತ್ಪಾದಿಸಿತ್ತು. ಹಿಂದಿನ ವರ್ಷಕ್ಕಿಂತ 52 ಪ್ರತಿಶತ ಕಡಿಮೆಯಾಗಿದೆ. ಭೂತಾನ್‌ ತನ್ನ ದೇಶದಲ್ಲಿ ಅಡಿಕೆ ಹೆಚ್ಚು ಉತ್ಪಾದಿಸಿದ ಸಂದರ್ಭ  ಭಾರತಕ್ಕೆ ಅಡಿಕೆಯನ್ನು ರಫ್ತು ಮಾಡುತ್ತದೆ ಮತ್ತು ಕಡಿಮೆ ಋತುವಿನಲ್ಲಿ ಭಾರತದಿಂದ  ಆಮದು ಮಾಡಿಕೊಳ್ಳುತ್ತದೆ.2022 ರಲ್ಲಿ ಉತ್ಪಾದನೆಯು 10,271 ಮೆಟ್ರಿಕ್ ಟನ್  ರಷ್ಟು ಕಡಿಮೆಯಾಗಿದೆ ಎಂದು ಭೂತಾನ್ ಕೃಷಿ ಮಾರುಕಟ್ಟೆ ಮತ್ತು ಸಹಕಾರಿ ಇಲಾಖೆಯ ದಾಖಲೆಗಳು ಹೇಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

4 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

4 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

10 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

10 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

17 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

17 hours ago