Advertisement
MIRROR FOCUS

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

Share

ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್ ಅಡಿಕೆ ಉತ್ಪಾದಿಸಿತ್ತು. ಈ ಬಾರಿ ಶೇ.52 ರಷ್ಟು ಕಡಿಮೆ ಇಳುವರಿಯಾಗಿದೆ. ಭಾರತಕ್ಕೆ ಭೂತಾನ್‌ ಅಡಿಕೆ ಈಗ ಸಮಸ್ಯೆಯಾಗುತ್ತಿಲ್ಲ. ಆದರೆ ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 442 ಚೀಲ ಅಡಿಕೆ ಸಹಿತ ಮೂವರನ್ನು ಗಡಿ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದೆ.ಮಣಿಪುರದ ಕಾಮ್‌ಜಾಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಗಡಿಯಾಚೆಗಿನ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. 442 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಗಡಿ ಭದ್ರತಾ ಪಡೆಯು ಸೆ.29 ರಿಂದ ಕಾರ್ಯಾಚರಣೆ ಆರಂಭಿಸಿತ್ತು.ಒಟ್ಟು ಕಾರ್ಯಾಚರಣೆಯಲ್ಲಿ  442 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ತಲಾ 100 ಕೆಜಿಯ 50 ಚೀಲಗಳು ಮತ್ತು ತಲಾ 80 ಕೆಜಿಯಂತೆ 392 ಚೀಲಗಳು ಸೇರಿವೆ ಎಂದು ಅಸ್ಸಾಂ ಗಡಿಭದ್ರತಾ ಪಡೆ ಮಾಹಿತಿ ನೀಡಿದೆ.

ಭೂತಾನ್‌ನಲ್ಲಿ ಕಡಿಮೆಯಾದ ಅಡಿಕೆ ಇಳುವರಿ : ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್  ಅಡಿಕೆಗಳನ್ನು ಉತ್ಪಾದಿಸಿತ್ತು. ಹಿಂದಿನ ವರ್ಷಕ್ಕಿಂತ 52 ಪ್ರತಿಶತ ಕಡಿಮೆಯಾಗಿದೆ. ಭೂತಾನ್‌ ತನ್ನ ದೇಶದಲ್ಲಿ ಅಡಿಕೆ ಹೆಚ್ಚು ಉತ್ಪಾದಿಸಿದ ಸಂದರ್ಭ  ಭಾರತಕ್ಕೆ ಅಡಿಕೆಯನ್ನು ರಫ್ತು ಮಾಡುತ್ತದೆ ಮತ್ತು ಕಡಿಮೆ ಋತುವಿನಲ್ಲಿ ಭಾರತದಿಂದ  ಆಮದು ಮಾಡಿಕೊಳ್ಳುತ್ತದೆ.2022 ರಲ್ಲಿ ಉತ್ಪಾದನೆಯು 10,271 ಮೆಟ್ರಿಕ್ ಟನ್  ರಷ್ಟು ಕಡಿಮೆಯಾಗಿದೆ ಎಂದು ಭೂತಾನ್ ಕೃಷಿ ಮಾರುಕಟ್ಟೆ ಮತ್ತು ಸಹಕಾರಿ ಇಲಾಖೆಯ ದಾಖಲೆಗಳು ಹೇಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

4 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

4 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago