Advertisement
MIRROR FOCUS

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

Share

ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್ ಅಡಿಕೆ ಉತ್ಪಾದಿಸಿತ್ತು. ಈ ಬಾರಿ ಶೇ.52 ರಷ್ಟು ಕಡಿಮೆ ಇಳುವರಿಯಾಗಿದೆ. ಭಾರತಕ್ಕೆ ಭೂತಾನ್‌ ಅಡಿಕೆ ಈಗ ಸಮಸ್ಯೆಯಾಗುತ್ತಿಲ್ಲ. ಆದರೆ ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 442 ಚೀಲ ಅಡಿಕೆ ಸಹಿತ ಮೂವರನ್ನು ಗಡಿ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದೆ.ಮಣಿಪುರದ ಕಾಮ್‌ಜಾಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಗಡಿಯಾಚೆಗಿನ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. 442 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಗಡಿ ಭದ್ರತಾ ಪಡೆಯು ಸೆ.29 ರಿಂದ ಕಾರ್ಯಾಚರಣೆ ಆರಂಭಿಸಿತ್ತು.ಒಟ್ಟು ಕಾರ್ಯಾಚರಣೆಯಲ್ಲಿ  442 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ತಲಾ 100 ಕೆಜಿಯ 50 ಚೀಲಗಳು ಮತ್ತು ತಲಾ 80 ಕೆಜಿಯಂತೆ 392 ಚೀಲಗಳು ಸೇರಿವೆ ಎಂದು ಅಸ್ಸಾಂ ಗಡಿಭದ್ರತಾ ಪಡೆ ಮಾಹಿತಿ ನೀಡಿದೆ.

ಭೂತಾನ್‌ನಲ್ಲಿ ಕಡಿಮೆಯಾದ ಅಡಿಕೆ ಇಳುವರಿ : ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್  ಅಡಿಕೆಗಳನ್ನು ಉತ್ಪಾದಿಸಿತ್ತು. ಹಿಂದಿನ ವರ್ಷಕ್ಕಿಂತ 52 ಪ್ರತಿಶತ ಕಡಿಮೆಯಾಗಿದೆ. ಭೂತಾನ್‌ ತನ್ನ ದೇಶದಲ್ಲಿ ಅಡಿಕೆ ಹೆಚ್ಚು ಉತ್ಪಾದಿಸಿದ ಸಂದರ್ಭ  ಭಾರತಕ್ಕೆ ಅಡಿಕೆಯನ್ನು ರಫ್ತು ಮಾಡುತ್ತದೆ ಮತ್ತು ಕಡಿಮೆ ಋತುವಿನಲ್ಲಿ ಭಾರತದಿಂದ  ಆಮದು ಮಾಡಿಕೊಳ್ಳುತ್ತದೆ.2022 ರಲ್ಲಿ ಉತ್ಪಾದನೆಯು 10,271 ಮೆಟ್ರಿಕ್ ಟನ್  ರಷ್ಟು ಕಡಿಮೆಯಾಗಿದೆ ಎಂದು ಭೂತಾನ್ ಕೃಷಿ ಮಾರುಕಟ್ಟೆ ಮತ್ತು ಸಹಕಾರಿ ಇಲಾಖೆಯ ದಾಖಲೆಗಳು ಹೇಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

2 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

13 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

17 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago