Advertisement
MIRROR FOCUS

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

Share

ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್ ಅಡಿಕೆ ಉತ್ಪಾದಿಸಿತ್ತು. ಈ ಬಾರಿ ಶೇ.52 ರಷ್ಟು ಕಡಿಮೆ ಇಳುವರಿಯಾಗಿದೆ. ಭಾರತಕ್ಕೆ ಭೂತಾನ್‌ ಅಡಿಕೆ ಈಗ ಸಮಸ್ಯೆಯಾಗುತ್ತಿಲ್ಲ. ಆದರೆ ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 442 ಚೀಲ ಅಡಿಕೆ ಸಹಿತ ಮೂವರನ್ನು ಗಡಿ ಭದ್ರತಾ ಪಡೆ ವಶಕ್ಕೆ ತೆಗೆದುಕೊಂಡಿದೆ.ಮಣಿಪುರದ ಕಾಮ್‌ಜಾಂಗ್ ಮತ್ತು ಉಖ್ರುಲ್ ಜಿಲ್ಲೆಗಳಲ್ಲಿ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಗಡಿಯಾಚೆಗಿನ ಅಡಿಕೆ ಕಳ್ಳಸಾಗಣೆಯನ್ನು ತಡೆದಿದೆ. 442 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಗಡಿ ಭದ್ರತಾ ಪಡೆಯು ಸೆ.29 ರಿಂದ ಕಾರ್ಯಾಚರಣೆ ಆರಂಭಿಸಿತ್ತು.ಒಟ್ಟು ಕಾರ್ಯಾಚರಣೆಯಲ್ಲಿ  442 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ತಲಾ 100 ಕೆಜಿಯ 50 ಚೀಲಗಳು ಮತ್ತು ತಲಾ 80 ಕೆಜಿಯಂತೆ 392 ಚೀಲಗಳು ಸೇರಿವೆ ಎಂದು ಅಸ್ಸಾಂ ಗಡಿಭದ್ರತಾ ಪಡೆ ಮಾಹಿತಿ ನೀಡಿದೆ.

ಭೂತಾನ್‌ನಲ್ಲಿ ಕಡಿಮೆಯಾದ ಅಡಿಕೆ ಇಳುವರಿ : ಭೂತಾನ್ 2022 ರಲ್ಲಿ ಸುಮಾರು 11,106 ಮೆಟ್ರಿಕ್ ಟನ್  ಅಡಿಕೆಗಳನ್ನು ಉತ್ಪಾದಿಸಿತ್ತು. ಹಿಂದಿನ ವರ್ಷಕ್ಕಿಂತ 52 ಪ್ರತಿಶತ ಕಡಿಮೆಯಾಗಿದೆ. ಭೂತಾನ್‌ ತನ್ನ ದೇಶದಲ್ಲಿ ಅಡಿಕೆ ಹೆಚ್ಚು ಉತ್ಪಾದಿಸಿದ ಸಂದರ್ಭ  ಭಾರತಕ್ಕೆ ಅಡಿಕೆಯನ್ನು ರಫ್ತು ಮಾಡುತ್ತದೆ ಮತ್ತು ಕಡಿಮೆ ಋತುವಿನಲ್ಲಿ ಭಾರತದಿಂದ  ಆಮದು ಮಾಡಿಕೊಳ್ಳುತ್ತದೆ.2022 ರಲ್ಲಿ ಉತ್ಪಾದನೆಯು 10,271 ಮೆಟ್ರಿಕ್ ಟನ್  ರಷ್ಟು ಕಡಿಮೆಯಾಗಿದೆ ಎಂದು ಭೂತಾನ್ ಕೃಷಿ ಮಾರುಕಟ್ಟೆ ಮತ್ತು ಸಹಕಾರಿ ಇಲಾಖೆಯ ದಾಖಲೆಗಳು ಹೇಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

6 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago