ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

July 26, 2025
10:05 PM

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ತಾಳೆ ಬೆಳೆ ಬೇಸಾಯ ಕುರಿತು ತರಬೇತಿ ಮತ್ತು ಅರಿವು ಕಾರ್ಯಕ್ರಮ ಬಳ್ಳಾರಿಯ  ಯರ್ರಗುಡಿ ಗ್ರಾಮದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಂಕರಪ್ಪ, ತಾಳೆ ಬೆಳೆ ಬೆಳೆಯುವುದಕ್ಕೆ ಹೆಚ್ಚು ರಸಗೊಬ್ಬರದ ಅಗತ್ಯವಿರುವುದಿಲ್ಲ, ಕೇಂದ್ರ ಸರ್ಕಾರದಿಂದ ಶೇಕಡ 75, ರಾಜ್ಯ ಸರ್ಕಾರದಿಂದ ಶೇಕಡ 25 ರಷ್ಟು ಸಹಾಯಧನ ದೊರೆಯಲಿದ್ದು ರೈತರು ಆರ್ಥಿಕ ಲಾಭ ಪಡೆಯಬಹುದಾಗಿದೆ ಎಂದರು.

ಹಗರಿ ಕೃಷಿ ವಿಜ್ಞಾನ ಕೇಂದ್ರದ ತಜ್ಞ ಡಾ. ಪಾಲಯ್ಯ, ತಾಳೆ ಬೆಳೆಗೆ ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೂ ಯಾವುದೇ ಕೀಟಭಾದೆ ಕಂಡು ಬಂದಿಲ್ಲ. ಹೆಚ್ಚು ಪ್ರಮಾಣದಲ್ಲಿ ಬೆಳೆದಲ್ಲಿ ಎಲೆ ಚುಕ್ಕೆ ರೋಗ ಬರುವ ಸಾಧ್ಯತೆಯಿದ್ದು, ನಿಯಂತ್ರಣಕ್ಕೆ ತರಬಹುದಾಗಿದೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ್ ಸಂಪಂಡಿ, ತಾಳೆ ಬೆಳೆಯೊಂದಿಗೆ ಅಂತರಬೆಳೆ ಬೇಸಾಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಾಯಧನ ನೀಡಲು ಮುಂದಾಗಿದ್ದು ರೈತರಿಗೆ ನೆರವಾಗಲಿದೆ ಎಂದರು.

ಈ ವೇಳೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ, ಹಿರಿಯರ ನಿರ್ದೇಶಕ ಶಂಕರಪ್ಪ, ಹಗರಿ ಕೃಷಿ ವಿಜ್ಞಾನ ಕೇಂದ್ರದ ತಜ್ಞರಾದ ಡಾ. ಪಾಲಯ್ಯ ಹಾಗೂ ಪ್ರಗತಿಪರ ರೈತರು ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror