Advertisement
MIRROR FOCUS

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

Share

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ತಾಳೆ ಬೆಳೆ ಬೇಸಾಯ ಕುರಿತು ತರಬೇತಿ ಮತ್ತು ಅರಿವು ಕಾರ್ಯಕ್ರಮ ಬಳ್ಳಾರಿಯ  ಯರ್ರಗುಡಿ ಗ್ರಾಮದಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಂಕರಪ್ಪ, ತಾಳೆ ಬೆಳೆ ಬೆಳೆಯುವುದಕ್ಕೆ ಹೆಚ್ಚು ರಸಗೊಬ್ಬರದ ಅಗತ್ಯವಿರುವುದಿಲ್ಲ, ಕೇಂದ್ರ ಸರ್ಕಾರದಿಂದ ಶೇಕಡ 75, ರಾಜ್ಯ ಸರ್ಕಾರದಿಂದ ಶೇಕಡ 25 ರಷ್ಟು ಸಹಾಯಧನ ದೊರೆಯಲಿದ್ದು ರೈತರು ಆರ್ಥಿಕ ಲಾಭ ಪಡೆಯಬಹುದಾಗಿದೆ ಎಂದರು.

ಹಗರಿ ಕೃಷಿ ವಿಜ್ಞಾನ ಕೇಂದ್ರದ ತಜ್ಞ ಡಾ. ಪಾಲಯ್ಯ, ತಾಳೆ ಬೆಳೆಗೆ ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೂ ಯಾವುದೇ ಕೀಟಭಾದೆ ಕಂಡು ಬಂದಿಲ್ಲ. ಹೆಚ್ಚು ಪ್ರಮಾಣದಲ್ಲಿ ಬೆಳೆದಲ್ಲಿ ಎಲೆ ಚುಕ್ಕೆ ರೋಗ ಬರುವ ಸಾಧ್ಯತೆಯಿದ್ದು, ನಿಯಂತ್ರಣಕ್ಕೆ ತರಬಹುದಾಗಿದೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ್ ಸಂಪಂಡಿ, ತಾಳೆ ಬೆಳೆಯೊಂದಿಗೆ ಅಂತರಬೆಳೆ ಬೇಸಾಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಾಯಧನ ನೀಡಲು ಮುಂದಾಗಿದ್ದು ರೈತರಿಗೆ ನೆರವಾಗಲಿದೆ ಎಂದರು.

ಈ ವೇಳೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ, ಹಿರಿಯರ ನಿರ್ದೇಶಕ ಶಂಕರಪ್ಪ, ಹಗರಿ ಕೃಷಿ ವಿಜ್ಞಾನ ಕೇಂದ್ರದ ತಜ್ಞರಾದ ಡಾ. ಪಾಲಯ್ಯ ಹಾಗೂ ಪ್ರಗತಿಪರ ರೈತರು ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

2 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

13 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago