12,000 ಹೆಕ್ಟೇರ್‌ಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಎಣ್ಣೆ ತಾಳೆ ಸಸಿ ನಾಟಿ | ಖಾದ್ಯ ತೈಲಗಳಲ್ಲಿ ಸ್ವಾವಲಂಬನೆಯತ್ತ ಚಿತ್ತ|

September 8, 2024
12:15 PM
ಖಾದ್ಯ ತೈಲಗಳಲ್ಲಿ ಸ್ವಾವಲಂಬನೆಯ ಪ್ರಮುಖ ಹೆಜ್ಜೆಯಾಗಿ, ಮೆಗಾ ಆಯಿಲ್ ಪಾಮ್ ಪ್ಲಾಂಟೇಶನ್ ಡ್ರೈವ್ 2024 ರ ಅಡಿಯಲ್ಲಿ 12,000 ಹೆಕ್ಟೇರ್‌ಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಎಣ್ಣೆ ತಾಳೆ ಸಸಿಗಳನ್ನು ನೆಡಲಾಗಿದೆ.

ಖಾದ್ಯ ತೈಲಗಳಲ್ಲಿ ಭಾರತವು ಸ್ವಾವಲಂಬನೆಯಾಗಬೇಕು ಎನ್ನುವ ಗುರಿಯೊಂದಿಗೆ ಈಗ ತಾಳೆ ಕೃಷಿಯನ್ನು ಉತ್ತೇಜಿಸಲಾಗುತ್ತಿದೆ. ಮೆಗಾ ಆಯಿಲ್ ಪಾಮ್ ಪ್ಲಾಂಟೇಶನ್ ಡ್ರೈವ್ 2024 ಎನ್ನುವ ಅಭಿಯಾನದಲ್ಲಿ ಕೆಲಸ ನಡೆಯುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ತಾಳೆ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ಈ ಬಾರಿ 12,000 ಹೆಕ್ಟೇರ್‌ಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಎಣ್ಣೆ ತಾಳೆ ಸಸಿಗಳನ್ನು ನೆಡಲಾಗಿದೆ. ಸುಮಾರು 10000 ಕೃಷಿಕರು ತಾಳೆ ಕೃಷಿಯಲ್ಲಿ ಹೊಸದಾಗಿ ತೊಡಗಿಸಿಕೊಂಡಿದ್ದಾರೆ.

Advertisement

ಖಾದ್ಯ ತೈಲದ ರಾಷ್ಟ್ರೀಯ ಮಿಷನ್ ಅಡಿಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನವು 15 ರಾಜ್ಯಗಳಾದ್ಯಂತ 10,000 ಕ್ಕೂ ಹೆಚ್ಚು ರೈತರಿಗೆ ನೇರವಾಗಿ ಪ್ರಯೋಜನವನ್ನು ನೀಡಿದೆ. ಇದು ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ತೈಲ ತಾಳೆ ಸಂಸ್ಕರಣಾ ಕಂಪನಿಗಳ ಸಾಮೂಹಿಕ ಪ್ರಯತ್ನಗಳ ಮೂಲಕ ಕೆಲಸ ನಡೆಯುತ್ತಿದೆ.

2024 ಜುಲೈ 15 ರಂದು ಪ್ರಾರಂಭವಾದ ಈ ಡ್ರೈವ್ ಆಯಿಲ್ ಪಾಮ್ ಕೃಷಿ ಅಭಿಯಾನವು ದೇಶದಲ್ಲಿ ಕಚ್ಚಾ ಪಾಮ್ ಆಯಿಲ್  ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಗೋವಾ, ಗುಜರಾತ್, ಕರ್ನಾಟಕ, ಕೇರಳ, ಒಡಿಶಾ, ತಮಿಳುನಾಡು, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಸೇರಿದಂತೆ ರಾಜ್ಯಗಳು ಸಕ್ರಿಯವಾಗಿ ಭಾಗವಹಿಸುತ್ತಿವೆ.

ಪತಂಜಲಿಯಂತಹ ಪ್ರಮುಖ ಕಂಪನಿಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಇದರ ಜೊತೆಗೆ ಗೋದ್ರೇಜ್‌, 3F ಆಯಿಲ್‌ ಮೊದಲಾದ ಕಂಪನಿಗಳ ಸಹಯೋಗವೂ ಇದೆ. ಜಾಗೃತಿ ಕಾರ್ಯಾಗಾರಗಳು, ಬೆಳೆ ಅಭಿಯಾನಗಳು ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಕೂಡಾ ಈ ಕಂಪನಿಗಳ ಸಹಕಾರ ನೀಡಿದೆ, ತಾಳೆ ಕೃಷಿಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಿವೆ.

ಖಾದ್ಯ ತೈಲಗಳ ಬೆಳೆಯನ್ನು ಬೆಳೆಯುವುದರಿಂದ ದೇಶಕ್ಕೂ ಪ್ರಯೋಜನವಾಗಿದೆ. ಖಾದ್ಯ ತೈಲ ಮೇಲಿನ ಆಮದು ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಪ್ರಮುಖ ಉದ್ದೇಶ. ಇದರ ಜೊತೆಗೆ ರೈತರ ಆದಾಯವನ್ನೂ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತಾಳೆ ಕೃಷಿ ಆರಂಭವಾಗಿದೆ.

In a major step towards self-reliance in edible oils, more than 17 lakh oil palm saplings have been planted across 12,000 hectares under the Mega Oil Palm Plantation Drive 2024. Conducted under the National Mission on Edible Oil-Oil Palm (NMEO-OP), the initiative has directly benefited over 10,000 farmers across 15 states, demonstrating the collective efforts of the Government of India, state governments, and oil palm processing companies.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ
April 9, 2025
7:03 PM
by: The Rural Mirror ಸುದ್ದಿಜಾಲ
ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ
April 9, 2025
6:59 PM
by: The Rural Mirror ಸುದ್ದಿಜಾಲ
ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |
April 9, 2025
2:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ
April 9, 2025
2:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group