Advertisement
ಸುದ್ದಿಗಳು

ಟ್ಯಾಂಕರ್ ಮೂಲಕ ಅಡಿಕೆ ಸಾಗಾಟ…!‌ | ಅಸ್ಸಾಂ ಗಡಿಯಲ್ಲಿ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪತ್ತೆ…..! |

Share

ಅಡಿಕೆ ಕಳ್ಳಸಾಗಾಣಿಕೆಗೆಯ ಜಾಲವನ್ನು ಅಸ್ಸಾಂ ಪೊಲೀಸರು ಪತ್ತೆ ಮಾಡಿದ್ದಾರೆ. ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿತ್ತು. ಇದೀಗ ಈ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ.

ಅಸ್ಸಾಂ-ಮಿಜೋರಾಂ ಗಡಿಯಲ್ಲಿನ ಕಚಾರ್ ಜಿಲ್ಲೆಯಿಂದ ಎರಡು ತೈಲ ಟ್ಯಾಂಕರ್‌ಗಳನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ.  ಟ್ಯಾಂಕರ್‌ಗಳ ಇಬ್ಬರು ಚಾಲಕರು  ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಿಜೋರಾಂಗೆ ಇಂಧನವನ್ನು ಸಾಗಿಸುವ ತೈಲ ಟ್ಯಾಂಕರ್‌ಗಳು ಅಸ್ಸಾಂಗೆ ಹಿಂದಿರುಗುವ ವೇಳೆ  ಮ್ಯಾನ್ಮಾರ್ ಮೂಲದ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಿದ್ದವು ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಲಾರಿಗಳ ಮೂಲಕ  ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ನಿರಂತರವಾಗಿ ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗುತ್ತಿತ್ತು. ಈಗ ಪೊಲೀಸ್ ಕಾವಲು ಹೆಚ್ಚಿದ್ದರಿಂದ ಕಳ್ಳಸಾಗಾಣಿಕೆದಾರರು ತಮ್ಮ ಕಾರ್ಯತಂತ್ರವನ್ನು ಬದಲಿಸಿ ತೈಲ ಟ್ಯಾಂಕರ್‌ಗಳನ್ನು ಬಳಸುತ್ತಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ಜಾಲ ಸಕ್ರಿಯವಾಗಿತ್ತು. ಇದೀಗ ಎರಡು ಟ್ಯಾಂಕರ್‌ ಮೂಲಕ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಎರಡು ಟ್ಯಾಂಕರ್‌ಗಳಿಂದ ಸುಮಾರು 170 ಚೀಲ ಅಡಿಕೆಯನ್ನು ಸುಮಾರು 10 ಟನ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಹಿಂದೆ ಟ್ಯಾಂಕರ್‌ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ತೈಲ ಟ್ಯಾಂಕರ್‌ಗಳಲ್ಲಿ ಅಡಿಕೆ ಕಳ್ಳಸಾಗಣೆ ಪತ್ತೆಯಾಗಿರುವುದು ಇದೇ ಮೊದಲು. ಇದೀಗ ಅಡಿಕೆ ಧಾರಣೆ ಏರಿಕೆಯಾಗಿರುವುದರಿಂದ ತೈಲ ಸಾಗಾಟದ ಟ್ಯಾಂಕರ್‌ಗಳಿಗೆ ಹೆಚ್ಚಿನ ದರ ನೀಡುವ ಆಮಿಷವೊಡ್ಡಿ ಟ್ಯಾಂಕರ್‌ಗಳಲ್ಲಿ ಅಡಿಕೆ ಸಾಗಾಣಿಗೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

7 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago