ಸುದ್ದಿಗಳು

ಟ್ಯಾಂಕರ್ ಮೂಲಕ ಅಡಿಕೆ ಸಾಗಾಟ…!‌ | ಅಸ್ಸಾಂ ಗಡಿಯಲ್ಲಿ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪತ್ತೆ…..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಕಳ್ಳಸಾಗಾಣಿಕೆಗೆಯ ಜಾಲವನ್ನು ಅಸ್ಸಾಂ ಪೊಲೀಸರು ಪತ್ತೆ ಮಾಡಿದ್ದಾರೆ. ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿತ್ತು. ಇದೀಗ ಈ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ.

Advertisement

ಅಸ್ಸಾಂ-ಮಿಜೋರಾಂ ಗಡಿಯಲ್ಲಿನ ಕಚಾರ್ ಜಿಲ್ಲೆಯಿಂದ ಎರಡು ತೈಲ ಟ್ಯಾಂಕರ್‌ಗಳನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ.  ಟ್ಯಾಂಕರ್‌ಗಳ ಇಬ್ಬರು ಚಾಲಕರು  ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಿಜೋರಾಂಗೆ ಇಂಧನವನ್ನು ಸಾಗಿಸುವ ತೈಲ ಟ್ಯಾಂಕರ್‌ಗಳು ಅಸ್ಸಾಂಗೆ ಹಿಂದಿರುಗುವ ವೇಳೆ  ಮ್ಯಾನ್ಮಾರ್ ಮೂಲದ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಿದ್ದವು ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಲಾರಿಗಳ ಮೂಲಕ  ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ನಿರಂತರವಾಗಿ ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗುತ್ತಿತ್ತು. ಈಗ ಪೊಲೀಸ್ ಕಾವಲು ಹೆಚ್ಚಿದ್ದರಿಂದ ಕಳ್ಳಸಾಗಾಣಿಕೆದಾರರು ತಮ್ಮ ಕಾರ್ಯತಂತ್ರವನ್ನು ಬದಲಿಸಿ ತೈಲ ಟ್ಯಾಂಕರ್‌ಗಳನ್ನು ಬಳಸುತ್ತಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ಜಾಲ ಸಕ್ರಿಯವಾಗಿತ್ತು. ಇದೀಗ ಎರಡು ಟ್ಯಾಂಕರ್‌ ಮೂಲಕ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಎರಡು ಟ್ಯಾಂಕರ್‌ಗಳಿಂದ ಸುಮಾರು 170 ಚೀಲ ಅಡಿಕೆಯನ್ನು ಸುಮಾರು 10 ಟನ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಹಿಂದೆ ಟ್ಯಾಂಕರ್‌ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ತೈಲ ಟ್ಯಾಂಕರ್‌ಗಳಲ್ಲಿ ಅಡಿಕೆ ಕಳ್ಳಸಾಗಣೆ ಪತ್ತೆಯಾಗಿರುವುದು ಇದೇ ಮೊದಲು. ಇದೀಗ ಅಡಿಕೆ ಧಾರಣೆ ಏರಿಕೆಯಾಗಿರುವುದರಿಂದ ತೈಲ ಸಾಗಾಟದ ಟ್ಯಾಂಕರ್‌ಗಳಿಗೆ ಹೆಚ್ಚಿನ ದರ ನೀಡುವ ಆಮಿಷವೊಡ್ಡಿ ಟ್ಯಾಂಕರ್‌ಗಳಲ್ಲಿ ಅಡಿಕೆ ಸಾಗಾಣಿಗೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮನೆಗೆ ಇಡುವ ಹೆಸರನ್ನು ಯಾವ ಅಕ್ಷರದಿಂದ ಆರಂಭಿಸಿದರೆ ಉತ್ತಮ..?

ಜ್ಯೋತಿಷ್ಯಶಾಸ್ತ್ರ ಮತ್ತು ವಾಸ್ತು ಶಾಸ್ತ್ರದಲ್ಲಿ, ಮನೆಯ ಹೆಸರು ಕೇವಲ ಒಂದು ಗುರುತಿನ ಚಿಹ್ನೆಯಷ್ಟೇ…

7 hours ago

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

15 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

15 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

15 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

15 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

16 hours ago