ಅಡಿಕೆ ಕಳ್ಳಸಾಗಾಣಿಕೆಗೆಯ ಜಾಲವನ್ನು ಅಸ್ಸಾಂ ಪೊಲೀಸರು ಪತ್ತೆ ಮಾಡಿದ್ದಾರೆ. ಮ್ಯಾನ್ಮಾರ್ನಿಂದ ಮಿಜೋರಾಂಗೆ ಟ್ಯಾಂಕರ್ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿತ್ತು. ಇದೀಗ ಈ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ.
ಅಸ್ಸಾಂ-ಮಿಜೋರಾಂ ಗಡಿಯಲ್ಲಿನ ಕಚಾರ್ ಜಿಲ್ಲೆಯಿಂದ ಎರಡು ತೈಲ ಟ್ಯಾಂಕರ್ಗಳನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ. ಟ್ಯಾಂಕರ್ಗಳ ಇಬ್ಬರು ಚಾಲಕರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಿಜೋರಾಂಗೆ ಇಂಧನವನ್ನು ಸಾಗಿಸುವ ತೈಲ ಟ್ಯಾಂಕರ್ಗಳು ಅಸ್ಸಾಂಗೆ ಹಿಂದಿರುಗುವ ವೇಳೆ ಮ್ಯಾನ್ಮಾರ್ ಮೂಲದ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಿದ್ದವು ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯವಾಗಿ ಮ್ಯಾನ್ಮಾರ್ನಿಂದ ಮಿಜೋರಾಂಗೆ ಲಾರಿಗಳ ಮೂಲಕ ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ನಿರಂತರವಾಗಿ ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗುತ್ತಿತ್ತು. ಈಗ ಪೊಲೀಸ್ ಕಾವಲು ಹೆಚ್ಚಿದ್ದರಿಂದ ಕಳ್ಳಸಾಗಾಣಿಕೆದಾರರು ತಮ್ಮ ಕಾರ್ಯತಂತ್ರವನ್ನು ಬದಲಿಸಿ ತೈಲ ಟ್ಯಾಂಕರ್ಗಳನ್ನು ಬಳಸುತ್ತಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ಜಾಲ ಸಕ್ರಿಯವಾಗಿತ್ತು. ಇದೀಗ ಎರಡು ಟ್ಯಾಂಕರ್ ಮೂಲಕ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಎರಡು ಟ್ಯಾಂಕರ್ಗಳಿಂದ ಸುಮಾರು 170 ಚೀಲ ಅಡಿಕೆಯನ್ನು ಸುಮಾರು 10 ಟನ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹಿಂದೆ ಟ್ಯಾಂಕರ್ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ತೈಲ ಟ್ಯಾಂಕರ್ಗಳಲ್ಲಿ ಅಡಿಕೆ ಕಳ್ಳಸಾಗಣೆ ಪತ್ತೆಯಾಗಿರುವುದು ಇದೇ ಮೊದಲು. ಇದೀಗ ಅಡಿಕೆ ಧಾರಣೆ ಏರಿಕೆಯಾಗಿರುವುದರಿಂದ ತೈಲ ಸಾಗಾಟದ ಟ್ಯಾಂಕರ್ಗಳಿಗೆ ಹೆಚ್ಚಿನ ದರ ನೀಡುವ ಆಮಿಷವೊಡ್ಡಿ ಟ್ಯಾಂಕರ್ಗಳಲ್ಲಿ ಅಡಿಕೆ ಸಾಗಾಣಿಗೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…