ಅಡಿಕೆ ಕಳ್ಳಸಾಗಾಣಿಕೆಗೆಯ ಜಾಲವನ್ನು ಅಸ್ಸಾಂ ಪೊಲೀಸರು ಪತ್ತೆ ಮಾಡಿದ್ದಾರೆ. ಮ್ಯಾನ್ಮಾರ್ನಿಂದ ಮಿಜೋರಾಂಗೆ ಟ್ಯಾಂಕರ್ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿತ್ತು. ಇದೀಗ ಈ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ.
ಅಸ್ಸಾಂ-ಮಿಜೋರಾಂ ಗಡಿಯಲ್ಲಿನ ಕಚಾರ್ ಜಿಲ್ಲೆಯಿಂದ ಎರಡು ತೈಲ ಟ್ಯಾಂಕರ್ಗಳನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ. ಟ್ಯಾಂಕರ್ಗಳ ಇಬ್ಬರು ಚಾಲಕರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಿಜೋರಾಂಗೆ ಇಂಧನವನ್ನು ಸಾಗಿಸುವ ತೈಲ ಟ್ಯಾಂಕರ್ಗಳು ಅಸ್ಸಾಂಗೆ ಹಿಂದಿರುಗುವ ವೇಳೆ ಮ್ಯಾನ್ಮಾರ್ ಮೂಲದ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಿದ್ದವು ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯವಾಗಿ ಮ್ಯಾನ್ಮಾರ್ನಿಂದ ಮಿಜೋರಾಂಗೆ ಲಾರಿಗಳ ಮೂಲಕ ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ನಿರಂತರವಾಗಿ ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗುತ್ತಿತ್ತು. ಈಗ ಪೊಲೀಸ್ ಕಾವಲು ಹೆಚ್ಚಿದ್ದರಿಂದ ಕಳ್ಳಸಾಗಾಣಿಕೆದಾರರು ತಮ್ಮ ಕಾರ್ಯತಂತ್ರವನ್ನು ಬದಲಿಸಿ ತೈಲ ಟ್ಯಾಂಕರ್ಗಳನ್ನು ಬಳಸುತ್ತಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ಜಾಲ ಸಕ್ರಿಯವಾಗಿತ್ತು. ಇದೀಗ ಎರಡು ಟ್ಯಾಂಕರ್ ಮೂಲಕ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಎರಡು ಟ್ಯಾಂಕರ್ಗಳಿಂದ ಸುಮಾರು 170 ಚೀಲ ಅಡಿಕೆಯನ್ನು ಸುಮಾರು 10 ಟನ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹಿಂದೆ ಟ್ಯಾಂಕರ್ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ತೈಲ ಟ್ಯಾಂಕರ್ಗಳಲ್ಲಿ ಅಡಿಕೆ ಕಳ್ಳಸಾಗಣೆ ಪತ್ತೆಯಾಗಿರುವುದು ಇದೇ ಮೊದಲು. ಇದೀಗ ಅಡಿಕೆ ಧಾರಣೆ ಏರಿಕೆಯಾಗಿರುವುದರಿಂದ ತೈಲ ಸಾಗಾಟದ ಟ್ಯಾಂಕರ್ಗಳಿಗೆ ಹೆಚ್ಚಿನ ದರ ನೀಡುವ ಆಮಿಷವೊಡ್ಡಿ ಟ್ಯಾಂಕರ್ಗಳಲ್ಲಿ ಅಡಿಕೆ ಸಾಗಾಣಿಗೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…