Advertisement
ಸುದ್ದಿಗಳು

ಟ್ಯಾಂಕರ್ ಮೂಲಕ ಅಡಿಕೆ ಸಾಗಾಟ…!‌ | ಅಸ್ಸಾಂ ಗಡಿಯಲ್ಲಿ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪತ್ತೆ…..! |

Share

ಅಡಿಕೆ ಕಳ್ಳಸಾಗಾಣಿಕೆಗೆಯ ಜಾಲವನ್ನು ಅಸ್ಸಾಂ ಪೊಲೀಸರು ಪತ್ತೆ ಮಾಡಿದ್ದಾರೆ. ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಟ್ಯಾಂಕರ್‌ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿತ್ತು. ಇದೀಗ ಈ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ.

Advertisement
Advertisement

ಅಸ್ಸಾಂ-ಮಿಜೋರಾಂ ಗಡಿಯಲ್ಲಿನ ಕಚಾರ್ ಜಿಲ್ಲೆಯಿಂದ ಎರಡು ತೈಲ ಟ್ಯಾಂಕರ್‌ಗಳನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ.  ಟ್ಯಾಂಕರ್‌ಗಳ ಇಬ್ಬರು ಚಾಲಕರು  ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಿಜೋರಾಂಗೆ ಇಂಧನವನ್ನು ಸಾಗಿಸುವ ತೈಲ ಟ್ಯಾಂಕರ್‌ಗಳು ಅಸ್ಸಾಂಗೆ ಹಿಂದಿರುಗುವ ವೇಳೆ  ಮ್ಯಾನ್ಮಾರ್ ಮೂಲದ ಅಡಿಕೆಯನ್ನು ಕಳ್ಳಸಾಗಣೆ ಮಾಡುತ್ತಿದ್ದವು ಎಂದು ಅಸ್ಸಾಂ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಾಮಾನ್ಯವಾಗಿ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಲಾರಿಗಳ ಮೂಲಕ  ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದನ್ನು ನಿರಂತರವಾಗಿ ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗುತ್ತಿತ್ತು. ಈಗ ಪೊಲೀಸ್ ಕಾವಲು ಹೆಚ್ಚಿದ್ದರಿಂದ ಕಳ್ಳಸಾಗಾಣಿಕೆದಾರರು ತಮ್ಮ ಕಾರ್ಯತಂತ್ರವನ್ನು ಬದಲಿಸಿ ತೈಲ ಟ್ಯಾಂಕರ್‌ಗಳನ್ನು ಬಳಸುತ್ತಿದ್ದಾರೆ. ಕಳೆದ ಕೆಲವು ಸಮಯಗಳಿಂದ ಈ ಜಾಲ ಸಕ್ರಿಯವಾಗಿತ್ತು. ಇದೀಗ ಎರಡು ಟ್ಯಾಂಕರ್‌ ಮೂಲಕ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ಎರಡು ಟ್ಯಾಂಕರ್‌ಗಳಿಂದ ಸುಮಾರು 170 ಚೀಲ ಅಡಿಕೆಯನ್ನು ಸುಮಾರು 10 ಟನ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಈ ಹಿಂದೆ ಟ್ಯಾಂಕರ್‌ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ತೈಲ ಟ್ಯಾಂಕರ್‌ಗಳಲ್ಲಿ ಅಡಿಕೆ ಕಳ್ಳಸಾಗಣೆ ಪತ್ತೆಯಾಗಿರುವುದು ಇದೇ ಮೊದಲು. ಇದೀಗ ಅಡಿಕೆ ಧಾರಣೆ ಏರಿಕೆಯಾಗಿರುವುದರಿಂದ ತೈಲ ಸಾಗಾಟದ ಟ್ಯಾಂಕರ್‌ಗಳಿಗೆ ಹೆಚ್ಚಿನ ದರ ನೀಡುವ ಆಮಿಷವೊಡ್ಡಿ ಟ್ಯಾಂಕರ್‌ಗಳಲ್ಲಿ ಅಡಿಕೆ ಸಾಗಾಣಿಗೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

6 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago