4 ದಶಕಗಳ ಹಿಂದೆ ಕಳುವಾಗಿದ್ದ ಭಾರತದ ಪ್ರಾಚೀನ ಶಿಲ್ಪ ಬೆಲ್ಜಿಯಂನಲ್ಲಿ ಪತ್ತೆ

March 23, 2022
10:44 PM

ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್​ನಲ್ಲಿರುವ ಭಾರತೀಯ ಹೈಕಮಿಷನರ್​ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.

ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ  ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.

1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror