4 ದಶಕಗಳ ಹಿಂದೆ ಕಳುವಾಗಿದ್ದ ಭಾರತದ ಪ್ರಾಚೀನ ಶಿಲ್ಪ ಬೆಲ್ಜಿಯಂನಲ್ಲಿ ಪತ್ತೆ

March 23, 2022
10:44 PM

ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್​ನಲ್ಲಿರುವ ಭಾರತೀಯ ಹೈಕಮಿಷನರ್​ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.

ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ  ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.

1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror