ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.
ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.
1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…