ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.
ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.
1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…