ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.
ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.
1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.