ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.
ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.
1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…