ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.
ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.
1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…