Advertisement
ರಾಷ್ಟ್ರೀಯ

4 ದಶಕಗಳ ಹಿಂದೆ ಕಳುವಾಗಿದ್ದ ಭಾರತದ ಪ್ರಾಚೀನ ಶಿಲ್ಪ ಬೆಲ್ಜಿಯಂನಲ್ಲಿ ಪತ್ತೆ

Share

ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್​ನಲ್ಲಿರುವ ಭಾರತೀಯ ಹೈಕಮಿಷನರ್​ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.

ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ  ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.

Advertisement

1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

4 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

4 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

17 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago