ಆಂಧ್ರಪ್ರದೇಶದ ವಸ್ತು ಸಂಗ್ರಹಾಲಯದಿಂದ ಕಳುವಾಗಿದ್ದ ಪ್ರಾಚೀನ ಶಿಲ್ಪವೊಂದು ನಾಲ್ಕು ದಶಕಗಳ ಬಳಿಕ ಮರಳಿ ಸ್ವದೇಶಕ್ಕೆ ಬರುತ್ತಿದೆ. 1990ರ ದಶಕದಲ್ಲಿ ಆಂಧ್ರಪ್ರದೇಶದ ನಾಗಾರ್ಜುನಕೊಂಡದಲ್ಲಿರುವ ಅಪರೂಪದ ಶಿಲ್ಪ ಕಳ್ಳತನವಾಗಿತ್ತು. ಇದೀಗ ಬೆಲ್ಜಿಯಂನಲ್ಲಿ ಆ ಶಿಲ್ಪ ಸಿಕ್ಕಿದ್ದು, ಬ್ರಸೆಲ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಸಂತೋಷ ಜಾ ಅವರಿಗೆ ಹಸ್ತಾಂತರಿಸಲಾಗಿದೆ.
ಗೌತಮ ಬುದ್ಧನ ಜೀವನದಲ್ಲಿ ನಡೆದ ಘಟನೆಗಳನ್ನು ವಿವರಿಸುವ ಶಿಲ್ಪವಿದು. ಆಸ್ಥಾನದಲ್ಲಿನ ವಿಚಾರಣೆಯ ಸಂದರ್ಭವನ್ನು ಇದರಲ್ಲಿ ಬಿಂಬಿಸಲಾಗಿದೆ. ರಾಜ ದಂಪತಿ ಸಿಂಹಾಸನದಲ್ಲಿ ಕುಳಿತಿರುವ ಮತ್ತು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಇದರ ಜತೆಗೆ, ಓರ್ವ ಮಹಿಳೆ ಮತ್ತು ಮಗು ಕಲಾಕೃತಿಯಲ್ಲಿ ಕಾಣಿಸುತ್ತಾರೆ.
1995ರಲ್ಲಿ ಈ ಕಲಾಕೃತಿಯ ಚಿತ್ರವನ್ನು ಕೊನೆಯ ಬಾರಿಗೆ ಇತಿಹಾಸಕಾರರೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ನಂತರ 2018ರಲ್ಲಿ ಈ ಕಲಾಕೃತಿಯನ್ನು ಬೆಲ್ಜಿಯಂ ಏಷ್ಯನ್ ಆರ್ಟ್ ಟ್ರೇಡ್ ಮಾರಾಟಕ್ಕೆ ಇಟ್ಟಿತ್ತು. ಅಲ್ಲಿಂದ ಎರಡು ವರ್ಷಗಳ ಕಾಲ ಸತತ ಪ್ರಯತ್ನದ ಬಳಿಕ ಈ ಶಿಲ್ಪವನ್ನು ಮರಳಿ ಪಡೆಯಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…