Advertisement
ಸುದ್ದಿಗಳು

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯಕ್ರಮ

Share

ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಮಾತನಾಡಿ ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ.ಯಾರು ಕಷ್ಟದಲ್ಲಿ ಇದ್ದಾರೋ ಯಾರು ಕಣ್ಣೀ ರಲ್ಲಿ ಇದ್ದಾರೋ ಯಾರು ದುಃಖ ದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ.ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.

ಮುಖ್ಯ ಅತಿಥಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ ಮಾತನಾಡಿ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವನಿಮಿತ್ತ.ಯಾವುದೇ ಫಲಾಪೇಕ್ಷೆಯಿಲ್ಲದೆ ಸ್ವಾರ್ಥ ವಿಲ್ಲದೆ,ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ ಎಂದು ಹೇಳಿದರು.

ಇ ಮುಖ್ಯ ಅತಿಥಿಗಳಾದ ಪೆರ್ಲಂಪಾಡಿಯ  ಹರಿಪ್ರಸಾದ್ ಮಾತನಾಡಿದರು. ಕಾರ್ಯಕ್ರಮದಲ್ಲಿ 52,000 ಸಾವಿರ ಮೊತ್ತದ 52ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳದ ಕಲಾವಿದ ಕೃಷ್ಣಪ್ಪ ಶಿವನಗರ, ಚೇತನ್ ಕುಮಾರ್ ಪುತ್ತೂರು,  ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು. ಶೀಲಾ ಸ್ವಾಗತಿಸಿ ಮಮತಾ ವಂದಿಸಿದರು. ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

9 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

14 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

21 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

22 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

22 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago