ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಮಾತನಾಡಿ ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ.ಯಾರು ಕಷ್ಟದಲ್ಲಿ ಇದ್ದಾರೋ ಯಾರು ಕಣ್ಣೀ ರಲ್ಲಿ ಇದ್ದಾರೋ ಯಾರು ದುಃಖ ದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ.ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.
ಮುಖ್ಯ ಅತಿಥಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ ಮಾತನಾಡಿ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವನಿಮಿತ್ತ.ಯಾವುದೇ ಫಲಾಪೇಕ್ಷೆಯಿಲ್ಲದೆ ಸ್ವಾರ್ಥ ವಿಲ್ಲದೆ,ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ ಎಂದು ಹೇಳಿದರು.
ಇ ಮುಖ್ಯ ಅತಿಥಿಗಳಾದ ಪೆರ್ಲಂಪಾಡಿಯ ಹರಿಪ್ರಸಾದ್ ಮಾತನಾಡಿದರು. ಕಾರ್ಯಕ್ರಮದಲ್ಲಿ 52,000 ಸಾವಿರ ಮೊತ್ತದ 52ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳದ ಕಲಾವಿದ ಕೃಷ್ಣಪ್ಪ ಶಿವನಗರ, ಚೇತನ್ ಕುಮಾರ್ ಪುತ್ತೂರು, ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು. ಶೀಲಾ ಸ್ವಾಗತಿಸಿ ಮಮತಾ ವಂದಿಸಿದರು. ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ನಿರೂಪಿಸಿದರು.ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…