Advertisement
ಸುದ್ದಿಗಳು

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯಕ್ರಮ

Share

ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಮಾತನಾಡಿ ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ.ಯಾರು ಕಷ್ಟದಲ್ಲಿ ಇದ್ದಾರೋ ಯಾರು ಕಣ್ಣೀ ರಲ್ಲಿ ಇದ್ದಾರೋ ಯಾರು ದುಃಖ ದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ.ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.

ಮುಖ್ಯ ಅತಿಥಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ ಮಾತನಾಡಿ ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವನಿಮಿತ್ತ.ಯಾವುದೇ ಫಲಾಪೇಕ್ಷೆಯಿಲ್ಲದೆ ಸ್ವಾರ್ಥ ವಿಲ್ಲದೆ,ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ ಎಂದು ಹೇಳಿದರು.

ಇ ಮುಖ್ಯ ಅತಿಥಿಗಳಾದ ಪೆರ್ಲಂಪಾಡಿಯ  ಹರಿಪ್ರಸಾದ್ ಮಾತನಾಡಿದರು. ಕಾರ್ಯಕ್ರಮದಲ್ಲಿ 52,000 ಸಾವಿರ ಮೊತ್ತದ 52ಆಹಾರ ಕಿಟ್ ವಿತರಣೆ ಮಾಡಲಾಯಿತು.ಹಾಗೂ 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳದ ಕಲಾವಿದ ಕೃಷ್ಣಪ್ಪ ಶಿವನಗರ, ಚೇತನ್ ಕುಮಾರ್ ಪುತ್ತೂರು,  ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು. ಶೀಲಾ ಸ್ವಾಗತಿಸಿ ಮಮತಾ ವಂದಿಸಿದರು. ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago