ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

Advertisement

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

10 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

10 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

20 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

22 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

22 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago