Advertisement
ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago