Advertisement
ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

1 hour ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

10 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

11 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

17 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

18 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

20 hours ago