Advertisement
ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

3 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

5 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

11 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

21 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

21 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago