Advertisement
ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

4 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

4 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

17 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago