Advertisement
ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

Advertisement
Advertisement

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Advertisement

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

Advertisement

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

Advertisement

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

3 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

3 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

4 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

4 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

4 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

4 hours ago