Advertisement
ವಾಣಿಜ್ಯ

#TomatoChallenge | ಟೊಮೆಟೋ ದರ ನಿಭಾಯಿಸಲು ಕೇಂದ್ರದಿಂದ ಹೊಸ ತಂತ್ರ | ಜನರಿಗೆ ‘ಟೊಮ್ಯಾಟೊ ಗ್ರ್ಯಾಂಡ್ ಚಾಲೆಂಜ್’

Share

ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ.  ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಸರ್ಕಾರಕ್ಕೆ ದೊಡ್ಡ ತಲೆನೋವವಾಗಿದೆ. ಜನರು ಟೊಮೆಟೊ ಖರೀದಿಗೆ ಹಿಂದೆ -ಮುಂದೆ ನೋಡುತ್ತಿದ್ದಾರೆ. ಅದರೂ ಖರೀದಿ ಅನಿವಾರ್ಯ.

ಇದೀಗ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಕಡಿಮೆ ಮಾಡುವುದು ಹೇಗೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ಜನರಿಂದಲೇ ತಿಳಿದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಟೊಮೆಟೊ ಬೆಲೆ ಏರಿಕೆ ಮತ್ತು ಇಳಿಕೆಯನ್ನು ತಡೆಗಟ್ಟಲು “ಟೊಮೆಟೋ ಗ್ರಾಂಡ್ ಚಾಲೆಂಜ್” ​ನ್ನು ತಂದಿದೆ. ಇದರಿಂದ ಜನರಿಂದ ಟೊಮೆಟೋ ಉತ್ಪಾದನೆಯ ಹೆಚ್ಚಳ, ಸಂಸ್ಕರಣೆ, ಸಂಗ್ರಹಣೆ ಹೇಗೆ ಎಂಬುದು ಅಭಿಪ್ರಾಯನ್ನು ಹಂಚಿಕೊಳ್ಳಲು ಈ ಕ್ರಮವನ್ನು ತರಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿರುವಂತೆ ಈ ವಾರದಿಂದ ಜನರ ಅಭಿಪ್ರಾಯಕ್ಕೆ ಮುಕ್ತ ಅವಕಾಶ ನೀಡಲು ಟೊಮೆಟೋ ಗ್ರಾಂಡ್ ಚಾಲೆಂಜ್ ಎಂಬುದನ್ನು ಜನರ ಮುಂದೆ ಪ್ರಸ್ತುತಿ ಪಡಿಸಲಾಗುತ್ತಿದೆ. ನಿಮ್ಮ ಸಲಹೆ ನಮಗೆ ಬೇಕು. ನಿಮ್ಮ ಅಭಿಪ್ರಾಯದಿಂದ ಇವುಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಈ ಹಿಂದೆ ಈರುಳ್ಳಿ ಬೆಲೆ ಹೆಚ್ಚಾದ ಸಮಯದಲ್ಲೂ ಇಂತಹ ಕಾರ್ಯತಂತ್ರವನ್ನು ಮಾಡಿದ್ದೇವೆ, ಆಗ 600 ಜನರ ಅಭಿಪ್ರಾಯ ಸಂಗ್ರಹ ಮಾಡಿ, ಅದರಲ್ಲಿ 13 ಜನರ ಅಭಿಪ್ರಾಯಕ್ಕೆ ಅನುಗುಣವಾಗಿ ತಜ್ಞರ ಜತೆಗೆ ಚರ್ಚಿಸಿದ್ದೇವೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಸಂಸ್ಕರಣೆ, ನಂತರದ ಕೊಯ್ಲು, ಸಂಗ್ರಹಣೆ ಮತ್ತು ಟೊಮೆಟೊ ಮೌಲ್ಯೀಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಟೊಮೆಟೋದ ಮೌಲ್ಯವರ್ಧನೆಯನ್ನು ನೀಡುವಾಗ ನಷ್ಟವನ್ನು ಕಡಿಮೆ ಮಾಡಲು ಸಮಗ್ರ ಕಾರ್ಯತಂತ್ರದ ಪರಿಹಾರವನ್ನು ಹೊರತರುವುದು ಇದರ ಉದ್ದೇಶವಾಗಿದೆ. ಇದನ್ನು ನಾಲ್ಕು ಹಂತಗಳಲ್ಲಿ ಅಭಿಪ್ರಾಯ ಸಂಗ್ರಹ ರೂಪಗಳನ್ನು ಮಾಡಲಾಗುತ್ತದೆ.

1. ಟೊಮೆಟೊ ಪ್ರಬೇದಗಳು, ಉತ್ಪಾದನಾ ತಂತ್ರಜ್ಞಾನ, ಹವಾಮಾನ ಪರಿಸ್ಥಿತಿಗಳು, ಸಂಸ್ಕರಣೆ.

2. ಬೆಳೆ ಯೋಜನೆ, ರೈತರಿಗೆ ಮಾರುಕಟ್ಟೆ ಬುದ್ಧಿವಂತಿಕೆ, ರೈತರು/ನರ್ಸರಿಗಳು/ವ್ಯಾಪಾರಿಗಳು/ಗ್ರಾಹಕ ಇಂಟರ್‌ಫೇಸ್‌.

3. ಕೊಯ್ಲು, ನಿರ್ವಹಣೆ ಮತ್ತು ಸಾರಿಗೆ ಸಮಯ.

4. ನವೀನ ಶೇಖರಣಾ ತಂತ್ರಜ್ಞಾನಗಳು ಮತ್ತು ದೀರ್ಘಾವಧಿಯ ಸಂರಕ್ಷಣೆಗಾಗಿ ಪರಿಹಾರಗಳು ಮತ್ತು ಹಾಳಾಗುವಿಕೆಯಿಂದಾಗಿ ಪ್ಯಾನಿಕ್ ಮಾರಾಟವನ್ನು ಕಡಿಮೆ ಮಾಡುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago