Advertisement
ರಾಜ್ಯ

ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ | ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ಕಲಾವಿದರು |

Share

ಒಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಾದ್ಯಂತ ನೈಟ್‌ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಈ ಬಗ್ಗೆ  ಸಾರ್ವಜನಿಕರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲಾವಿದರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಕಲೆಗೆ, ಕಲಾವಿದರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸರಕಾರ ನೈಟ್ ಕರ್ಫ್ಯೂ ಹೇರಿದೊಡನೆ ಆತಂಕಗೊಂಡ ಹೊರ ರಾಜ್ಯ ಮತ್ತು ಹೊರ ಜಿಲ್ಲೆಯ ಪ್ರವಾಸಿಗರು ಬುಕ್ಕಿಂಗ್ ಮಾಡಲಾದ ರೂಮ್‌ಗಳನ್ನು ರದ್ದುಪಡಿಸಿದ್ದು, ಮಾತ್ರವಲ್ಲದೆ ಇದರಿಂದ ಹೋಟೆಲ್ ಮತ್ತು ಲಾಡ್ಜ್ ಮಾಲಕರಿಗೆ ಹೊಡೆತ ಬಿದ್ದಿದೆ.  ಟ್ಯಾಕ್ಸ್ , ಕ್ಯಾಬ್, ಅಟೋ ರಿಕ್ಷಾದ ಚಾಲಕರಿಗೂ ಈ ನೈಟ್ ಕರ್ಫ್ಯೂನಿಂದ ಸಮಸ್ಯೆಯಾಗಿದೆ ಎಂದು ಅಟೋ ಚಾಲಕರು ಹೇಳಿದ್ದಾರೆ.

ದ.ಕ ಜಿಲ್ಲೆಯ ಅದರಲ್ಲೂ ನಗರದ ವ್ಯಾಪಾರ- ವಹಿವಾಟುಗಳು ಚುರುಕುಗೊಳ್ಳತೊಡಗಿದ್ದು ಎರಡು ವರ್ಷದಲ್ಲಾದ ಆರ್ಥಿಕ ನಷ್ಟವನ್ನು ಸರಿದೂಗಿಸಲು ಜನಸಾಮಾನ್ಯರು, ವ್ಯಾಪಾರಿಗಳು, ಉದ್ಯಮಿಗಳು ಹೆಣಗಾಡುತ್ತಿರುವಾಗಲೇ ಸರಕಾರದ ಹೊಸ ಆದೇಶವು ವ್ಯಾಪಕ ಆಕ್ರೋಶ, ಅಸಮಾಧಾನಕ್ಕೆ ಕಾರಣವಾಗಿದೆ.

ಜಿಲ್ಲಾಧಿಕಾರಿಗಳಿಗೆ ಮನವಿ

ಈ ನಡುವೆ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಟ ಮೂಲಕ ಕಲಾವಿದರೆಲ್ಲರ ಪರವಾಗಿ ಹಿರಿಯ ಕಲಾವಿದ ಸಂಚಾಲಕ ಸರಪಾಡಿ ಅಶೋಕ್ ಶೆಟ್ಟಿ ಇವರ ಮೂಲಕ ದ.ಕ. ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಲಾಗಿದೆ.

ಜಿಲ್ಲಾಧಿಕಾರಿಗಳಿಗೆ  ಮನವಿ ನೀಡುವ ವೇಳೆ ಕಲೆಯ ,ಕಲಾವಿದರ  ಬಗ್ಗೆ  ಮಾಹಿತಿ ನೀಡಿ ಮನವಿ ನೀಡಲಾಯಿತು.  ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ವಾರದ ಬಳಿಕ ಪರಿಸ್ಥಿತಿ ನೋಡಿಕೊಂಡು  ಮುಂದಿನ ನಿರ್ಧಾರ ಪಡೆಯಲಾಗುವುದು  ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಆದೇಶದ ಹೊರತಾಗಿ 1 ಗಂಟೆ ಅಥವಾ 2 ಗಂಟೆ ಮಾಡಿ 10-30 ರಿಂದ 11 ರ ಒಳಗೆ ಪ್ರದರ್ಶನ ಮಾಡಿ ಮುಗಿಸಿ ಸರಕಾರಿ ಆದೇಶಕ್ಕೆ ಗೌರವ ನೀಡುವ ಬಗ್ಗೆ ಮಾಹಿತಿ ನೀಡಿದರು.  ಕಾರ್ಯಕ್ರಮ ಮುಗಿದ ಬಳಿಕ ಕಲಾವಿದರು ಮನೆ ಸೇರಲು ಅಡ್ಡಿಯಾಗದಂತೆ ಮೇಳದ ಗುರುತು ಪತ್ರ ಜೊತೆಯಲ್ಲಿರಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗುವುದು  ಎಂದು ಅಶೋಕ್‌ ಶೆಟ್ಟಿ ಹೇಳಿದರು.

ಈ ಸಂದರ್ಭ ರಂಗಭೂಮಿ, ತುಳು ಸಿನೆಮಾ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಸಸಿಹಿತ್ಲು ಮೇಳದ ವ್ಯವಸ್ಥಾಪಕರು ರಾಜೇಶ್ ಗುಜರನ್, ಮಂಗಳಾದೇವಿ ಮೇಳದ ವ್ಯವಸ್ಥಾಪಕರು ಎಸ್. ಎ ವರ್ಕಾಡಿ, ಸಂಚಾಲಕರು ಕಡಬ ದಿನೇಶ್ ರೈ, ಬಪ್ಪನಾಡು ಮೇಳದ ವ್ಯವಸ್ಥಾಪಕರು ವಿನೋದ್ ಕುಮಾರ್ ಬಜ್ಪೆ, ಸುಂಕದಕಟ್ಟೆ ಮೇಳದ ವ್ಯವಸ್ಥಾಪಕರು ಶ್ರೀನಿವಾಸ ಸಾಲ್ಯಾನ್ ಬೊಂದೇಲ್, ಪ್ರಬಂದಕರು ರಮೇಶ್ ಕುಲಶೇಖರ, ನಾಗಶಕ್ತಿ ಮೇಳದ ವ್ಯವಸ್ಥಾಪಕರು ಸಂತೋಷ್ ಶೆಟ್ಟಿ ಕಡ್ತಲ, ಕಲಾವಿದರಾದ ಎಂ ಕೆ ರಮೇಶ್ ಆಚಾರ್ಯ, ಮಿಜಾರು ತಿಮ್ಮಪ್ಪ, ಪ್ರದೀಪ್ ಕೊಡ್ಯಡ್ಕ,. ಕೊಡಪದವು ದಿನೇಶ್ ಶೆಟ್ಟಿಗಾರ್, ಸಂತೋಷ್ ಕರಂಬಾರ್, ಸುದರ್ಶನ್ ಸೂರಿಂಜೆ, ಕಲವಾರು ಬೆಂಕಿನಾತೇಶ್ವರ ಮೇಳದ ಸಂದೇಶ್ ಬಡಗ ಬೆಳ್ಳೂರು, ಹಿರಿಯಡ್ಕ ಮೇಳದ ಭಾಗವತರು ದಯಾನಂದ ಕೋಡಿಕಲ್, ನೃತ್ಯ ಕಲಾವಿದರ ಪರವಾಗಿ ಡಾನ್ಸ್ ಪೇಡರಶನ್  ಪುತ್ತೂರು ಯೂನಿಯನ್ ರಾಜೇಶ್ ವಿಟ್ಲ, ಶಿವಪ್ಪ ಕಳ್ಮಂಜ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

5 minutes ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

15 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago