ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊರೋನಾ ರೂಪಾಂತರಿ ಓಮ್ರಿಕಾನ್ ಸೋಂಕು ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟೆಚ್ಚರಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಕೊರೋನಾ ರೂಪಾಂತರಿ ಓಮ್ರಿಕಾನ್ ಸೋಂಕು ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೊನಾ ರೂಪಾಂತರಿ ಆತಂಕ ಈಗ ದೇಶಕ್ಕೂ ಎದುರಾಗಿದೆ. ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣಗಳು, ಹಾಂಗ್ಕಾಂಗ್ನಲ್ಲಿ 1 ಪ್ರಕರಣ ಈಗಾಗಲೇ ಪತ್ತೆಯಾಗಿವೆ.
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಈ ತಿಂಗಳು ಆಗಮಿಸಿದ ಸುಮಾರು 94 ಪ್ರಯಾಣಿಕರ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು, ಅದರಲ್ಲಿ ಎರಡು ಪ್ರಕರಣದಲ್ಲಿ ಓಮಿಕ್ರಾನ್ ಸೋಂಕು ಇದೆ ಎಂದು ಶಂಕಿಸಲಾಗಿದೆ. ಹೀಗಾಗಿ ಸದ್ಯ ವಿದೇಶ ಪ್ರಯಾಣದ ಮೇಲೆ ತೀರಾ ನಿಗಾ ಇಡಲಾಗಿದೆ. ಪ್ರಯಾಣಿಕರು ಮತ್ತು ಅವರ ಸಂಪರ್ಕಗಳ ಸ್ಕ್ರೀನಿಂಗ್ ಮತ್ತು ಪರೀಕ್ಷೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದ್ದು , ಕರ್ನಾಟಕ – ಕೇರಳ-ತಮಿಳುನಾಡಿ ಸೇರಿದಂತೆ ಗಡಿಭಾಗದ ಓಡಾಟದ ಕಡೆಗೂ ಕಟ್ಟೆಚ್ಚರ ಇರಿಸಲಾಗಿದೆ.
ಇದರ ಜೊತೆಗೆ ಸರ್ಕಾರಿ ಕಚೇರಿಗಳು, ಮಾಲ್ಗಳು, ಹೋಟೆಲ್ಗಳು, ಸಿನಿಮಾ ಹಾಲ್ಗಳು, ಮೃಗಾಲಯಗಳು, ಈಜುಕೊಳಗಳು ಮತ್ತು ಗ್ರಂಥಾಲಯಗಳಲ್ಲಿ ಕೆಲಸ ಮಾಡುವವರಿಗೆ ಎರಡನೇ ಡೋಸ್ ಲಸಿಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.
ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸೂಚನೆ ನೀಡಿದ್ದಾರೆ.
ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.