ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊರೋನಾ ರೂಪಾಂತರಿ ಓಮ್ರಿಕಾನ್ ಸೋಂಕು ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟೆಚ್ಚರಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಕೊರೋನಾ ರೂಪಾಂತರಿ ಓಮ್ರಿಕಾನ್ ಸೋಂಕು ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೊನಾ ರೂಪಾಂತರಿ ಆತಂಕ ಈಗ ದೇಶಕ್ಕೂ ಎದುರಾಗಿದೆ. ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣಗಳು, ಹಾಂಗ್ಕಾಂಗ್ನಲ್ಲಿ 1 ಪ್ರಕರಣ ಈಗಾಗಲೇ ಪತ್ತೆಯಾಗಿವೆ.
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಈ ತಿಂಗಳು ಆಗಮಿಸಿದ ಸುಮಾರು 94 ಪ್ರಯಾಣಿಕರ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು, ಅದರಲ್ಲಿ ಎರಡು ಪ್ರಕರಣದಲ್ಲಿ ಓಮಿಕ್ರಾನ್ ಸೋಂಕು ಇದೆ ಎಂದು ಶಂಕಿಸಲಾಗಿದೆ. ಹೀಗಾಗಿ ಸದ್ಯ ವಿದೇಶ ಪ್ರಯಾಣದ ಮೇಲೆ ತೀರಾ ನಿಗಾ ಇಡಲಾಗಿದೆ. ಪ್ರಯಾಣಿಕರು ಮತ್ತು ಅವರ ಸಂಪರ್ಕಗಳ ಸ್ಕ್ರೀನಿಂಗ್ ಮತ್ತು ಪರೀಕ್ಷೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದ್ದು , ಕರ್ನಾಟಕ – ಕೇರಳ-ತಮಿಳುನಾಡಿ ಸೇರಿದಂತೆ ಗಡಿಭಾಗದ ಓಡಾಟದ ಕಡೆಗೂ ಕಟ್ಟೆಚ್ಚರ ಇರಿಸಲಾಗಿದೆ.
ಇದರ ಜೊತೆಗೆ ಸರ್ಕಾರಿ ಕಚೇರಿಗಳು, ಮಾಲ್ಗಳು, ಹೋಟೆಲ್ಗಳು, ಸಿನಿಮಾ ಹಾಲ್ಗಳು, ಮೃಗಾಲಯಗಳು, ಈಜುಕೊಳಗಳು ಮತ್ತು ಗ್ರಂಥಾಲಯಗಳಲ್ಲಿ ಕೆಲಸ ಮಾಡುವವರಿಗೆ ಎರಡನೇ ಡೋಸ್ ಲಸಿಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.
ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…