Advertisement
MIRROR FOCUS

ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ | ರಾಜ್ಯದಲ್ಲಿ ಕಟ್ಟೆಚ್ಚರಕ್ಕೆ ಸರ್ಕಾರ ಸೂಚನೆ |

Share

ದಕ್ಷಿಣ ಆಫ್ರಿಕಾದಲ್ಲಿ ಗೋಚರಿಸಿರುವ ಕೊರೋನಾ  ರೂಪಾಂತರಿ ಓಮ್ರಿಕಾನ್ ಸೋಂಕು ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ  ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯದಲ್ಲೂ ಕಟ್ಟೆಚ್ಚರಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಕೊರೋನಾ  ರೂಪಾಂತರಿ ಓಮ್ರಿಕಾನ್ ಸೋಂಕು ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ಕೊರೊನಾ ರೂಪಾಂತರಿ ಆತಂಕ ಈಗ ದೇಶಕ್ಕೂ ಎದುರಾಗಿದೆ. ದಕ್ಷಿಣ ಆಫ್ರಿಕಾದಲ್ಲಿ 6 ಪ್ರಕರಣಗಳು, ಹಾಂಗ್‌ಕಾಂಗ್‌ನಲ್ಲಿ 1 ಪ್ರಕರಣ ಈಗಾಗಲೇ ಪತ್ತೆಯಾಗಿವೆ.

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.  ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಈ ತಿಂಗಳು ಆಗಮಿಸಿದ ಸುಮಾರು 94 ಪ್ರಯಾಣಿಕರ  ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು, ಅದರಲ್ಲಿ  ಎರಡು ಪ್ರಕರಣದಲ್ಲಿ ಓಮಿಕ್ರಾನ್‌ ಸೋಂಕು ಇದೆ ಎಂದು ಶಂಕಿಸಲಾಗಿದೆ. ಹೀಗಾಗಿ ಸದ್ಯ ವಿದೇಶ ಪ್ರಯಾಣದ ಮೇಲೆ ತೀರಾ ನಿಗಾ ಇಡಲಾಗಿದೆ.  ಪ್ರಯಾಣಿಕರು ಮತ್ತು ಅವರ ಸಂಪರ್ಕಗಳ ಸ್ಕ್ರೀನಿಂಗ್ ಮತ್ತು ಪರೀಕ್ಷೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದ್ದು , ಕರ್ನಾಟಕ – ಕೇರಳ-ತಮಿಳುನಾಡಿ ಸೇರಿದಂತೆ ಗಡಿಭಾಗದ ಓಡಾಟದ ಕಡೆಗೂ ಕಟ್ಟೆಚ್ಚರ ಇರಿಸಲಾಗಿದೆ.

ಇದರ ಜೊತೆಗೆ ಸರ್ಕಾರಿ ಕಚೇರಿಗಳು, ಮಾಲ್‌ಗಳು, ಹೋಟೆಲ್‌ಗಳು, ಸಿನಿಮಾ ಹಾಲ್‌ಗಳು, ಮೃಗಾಲಯಗಳು, ಈಜುಕೊಳಗಳು ಮತ್ತು ಗ್ರಂಥಾಲಯಗಳಲ್ಲಿ ಕೆಲಸ ಮಾಡುವವರಿಗೆ ಎರಡನೇ ಡೋಸ್ ಲಸಿಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕೊರೋನಾ ಸೋಂಕಿನ ಒಮಿಕ್ರೋನ್ ರೂಪಾಂತರಿ ಕುರಿತು ಎಚ್ಚರಿಕೆಯಿಂದಿರಲು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸೂಚನೆ ನೀಡಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

4 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

8 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

20 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

21 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

21 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

22 hours ago