ಭಾರತೀಯ ಹಿಂದುಗಳ ಹಲವು ದಶಕಗಳ ಕನಸು ಈಡೇರುವ ಸಮಯ ಸನ್ನಿಹಿತವಾಗುತ್ತಿದೆ. ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ.
ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಜೂನ್ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…