Advertisement
MIRROR FOCUS

#RamMandir | ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಅಂತ್ಯ | ಜ.22 ರಂದು ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ

Share

ಭಾರತೀಯ ಹಿಂದುಗಳ ಹಲವು ದಶಕಗಳ ಕನಸು ಈಡೇರುವ ಸಮಯ ಸನ್ನಿಹಿತವಾಗುತ್ತಿದೆ. ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆ ಇದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರತಿಷ್ಠಾಪನೆಯ ಅಂತಿಮ ದಿನಾಂಕವನ್ನು ಮೋದಿ ಅವರಿಗೆ ಇನ್ನೂ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಜನವರಿ 14 ರಂದು ಮಕರ ಸಂಕ್ರಾಂತಿಯ ನಂತರ ರಾಮಲಲ್ಲಾನ ಪವಿತ್ರೀಕರಣವನ್ನು ಪ್ರಾರಂಭಿಸಲು ಮಂದಿರ ಟ್ರಸ್ಟ್ ನಿರ್ಧರಿಸಿದೆ. ಅದರ ನಂತರ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಜೂನ್‌ನಲ್ಲಿ ರಾಮ ಮಂದಿರ ಟ್ರಸ್ಟ್ ಸದಸ್ಯ ಮಿಶ್ರಾ ಅವರು, ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಮುಂದಿನ ವರ್ಷ ಜನವರಿ 24 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭಕ್ತರಿಗೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

20 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

21 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago